ಶೀಲ ಶಂಕಿಸಿ ಪತಿಯಿಂದ ಪತ್ನಿ ಕೊಲೆ

ಶೀಲ ಶಂಕಿಸಿ ಪತಿಯಿಂದ ಪತ್ನಿ ಕೊಲೆ

ಯಾದಗಿರಿ: ಪತ್ನಿ ಶೀಲ ಶಂಕಿಸಿ ಪತಿಯೇ ತನ್ನ ಪತ್ನಿಯನ್ನು ಕೊಲೆ ಮಾಡಿರುವ ಘಟನೆ ಯಾದಗಿರಿ ಜಿಲ್ಲೆಯ ಯಾದಗಿರಿ ತಾಲೂಕಿನ ಮಾಧ್ವಾರ ಗ್ರಾಮದ ಜಮೀನಿನಲ್ಲಿ ಘಟನೆ ನಡೆದಿದೆ.

ಮಾಧ್ವಾರ ಗ್ರಾಮದ ರೇಣುಕಾ ತನ್ನ ಗಂಡ ಚೌಡಪ್ಪನಿಂದ ಕೊಲೆಯಾದ ಪತ್ನಿ. ರೇಣುಕಾ ಮತ್ತು ಚೌಡಪ್ಪ ಕಳೆದ ಒಂಬತ್ತು ವರ್ಷದಿಂದ ದಾಂಪತ್ಯ ನಡೆಸುತ್ತಿದ್ದರು ಈ ಇಬ್ಬರಿಗೆ ಒಬ್ಬ ಮಗ ಕೂಡ ಇದ್ದಾನೆ. ಆದ್ರೆ ಮೊದಲಿಂದಲೂ ಚೌಡಪ್ಪ ರೇಣುಕಾಳ ಶೀಲ ಶಂಕಿಸಿ ಜಗಳ ಮಾಡುತ್ತಿದ್ದ ಎನ್ನಲಾಗಿದೆ.

ರೇಣುಕಾ ಎಂದಿನಂತೆ ತನ್ನ ಪುತ್ರನ ಜೊತೆ ಕುರಿ ಮೇಯಿಸಲು ಜಮೀನಿಗೆ ತೆರಳಿದ್ದಳು. ಈ ವೇಳೆ ಜಮೀನಿಗೆ ಬಂದ ಚೌಡಪ್ಪ ಆಕೆಗೆ ಸಲಾಕೆಯಿಂದ ತಲೆಗೆ ಹೊಡೆದು ಕೊಲೆ ಮಾಡಿ ಓಡಿಹೋಗಿದ್ದಾನೆ. ತನ್ನ ತಂದೆ ಗಾಬರಿಯಿಂದ ಓಡಿಹೋಗುವುದನ್ನು ಕಂಡ ಮಗ, ತನ್ನ ತಾಯಿದ್ದ ಸ್ಥಳಕ್ಕೆ ತೆರಳಿದಾಗ ಘಟನೆ ಬೆಳಕಿಗೆ ಬಂದಿದೆ. ಸದ್ಯ ತಲೆ ಚೌಡಪ್ಪ ಮರೆಯಿಸಿಕೊಂಡಿದ್ದಾನೆ. ಈ ಬಗ್ಗೆ ಸೈದಾಪುರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related