ನಾನು ಟಿಪಿಕಲ್ ರಾಜಕಾರಣಿಯಲ್ಲ: ಸುಮಲತಾ

ನಾನು ಟಿಪಿಕಲ್ ರಾಜಕಾರಣಿಯಲ್ಲ: ಸುಮಲತಾ

ಮಂಡ್ಯ: ಕಳೆದ ಬಾರಿ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಮಂಡ್ಯ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಭರ್ಜರಿ ಗೆಲುವನ್ನು ಸಾಧಿಸಿದ ಸಂಸದೆ ಸುಮಲತಾ ಅಂಬರೀಶ್ ಅವರು ಇಂದು ಮಂಡ್ಯದ ಜನತೆಯ ಮುಂದುಗಡೆ ತಮ್ಮ ನಿರ್ಧಾರವನ್ನು ತಿಳಿಸಿದ್ದಾರೆ.

ಎಂಪಿ ಸೀಟ್ ಅನ್ನು ಬಿಟ್ಟುಕೊಟ್ಟು ನಾನು ಬಿಜೆಪಿ ಪಕ್ಷವನ್ನು ಸೇರಿಕೊಂಡಿದ್ದೇನೆ ಎಂದು ಮಂಡ್ಯದಲ್ಲಿ ಹಾಲಿ ಸಂಸದೆ ಸುಮಲತವರು ಹೇಳಿದ್ದಾರೆ.

ಒಬ್ಬ ದೇಶದ ಪ್ರಧಾನಿ ನನಗೆ ಕರೆ ಮಾಡಿ ಯಾವುದೇ ತಪ್ಪು ನಿರ್ಧಾರವನ್ನು ಕೈಗೊಳ್ಳಬೇಡಿ ಎಂದು ಹೇಳಿದ್ದಾರೆ. ಇದರಿಂದಲೇ ಗೊತ್ತಾಗುತ್ತದೆ ನನ್ನ ಮೇಲೆ ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಎಷ್ಟು ಅಭಿಮಾನವನ್ನು ಇಟ್ಟಿದ್ದಾರೆ ಎಂದು ಹೇಳಿದರು.

ಮಂಡ್ಯದ ಕಾಳಿಕಾಂಬ ದೇವಸ್ಥಾನದ ಆವರಣದಲ್ಲಿ ಬುಧವಾರ ಮಾತನಾಡಿದ ಅವರು, ಎಂಪಿ ಚುನಾವಣೆ ಹುಡುಗಾಟವಲ್ಲ. ನಾನೇನೋ ದ್ವೇಷ ಅಥವಾ ಹಠಕ್ಕೆ ಸ್ಪರ್ಧೆ ಮಾಡಬೇಕು ಎಂದರೆ ನಾನು ಈಗಲೂ ಸ್ಪರ್ಧೆ ಮಾಡಬಹುದು. ಆದರೆ, ಇದರಿಂದ ಯಾರಿಗೆ ನಷ್ಟವಾಗುತ್ತದೆ ಎಂಬುದನ್ನೂ ಕೂಡ ಮುಲಾಜು ನೋಡಬೇಕು. ನಾನು ಸಂಸದೆ ಆಗಬೇಕೆಂದಿದ್ದರೆ ಬಿಜೆಪಿಯ ಗೆಲ್ಲುವ ಹಲವು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಬಹುದಿತ್ತು. ನಾನು ಟಿಪಿಕಲ್ ರಾಜಕಾರಣಿಯಲ್ಲ. ಆದರೆ, ನನಗೆ ರಾಜಕಾರಣ ಏನಿದ್ದರೂ ಅದು ಮಂಡ್ಯದಲ್ಲಿ ಮಾತ್ರ. ಇಲ್ಲದಿದ್ದರೆ ನನಗೆ ರಾಜಕೀಯವೇ ಬೇಡ. ಕಾರಣ ಅಂಬರೀಶ್ ಅವರ ಅಭಿಮಾನಿಗಳಿರುವ ಮಂಡ್ಯವನ್ನು ಬಿಟ್ಟು ನಾನೆಲ್ಲೂ ಹೋಗುವುದಿಲ್ಲ ಎಂದರು.

 

Related