ನಾನು ಭ್ರಷ್ಟಾಚಾರದಲ್ಲಿ ಭಾಗಿಯಾಗಿಲ್ಲ ಡಿಕೆಶಿ

ನಾನು ಭ್ರಷ್ಟಾಚಾರದಲ್ಲಿ ಭಾಗಿಯಾಗಿಲ್ಲ ಡಿಕೆಶಿ

ಚಿತ್ರದುರ್ಗ : ಆದಾಯಕ್ಕಿಂತ ಅಧಿಕ ಆಸ್ತಿ ಆರೋಪದಡಿ ಕರ್ನಾಟಕದಲ್ಲಿ ಮಾತ್ರ ಒಂದು ಕೇಸ್ ಸಿಬಿಐಗೆ ನೀಡಿದ್ದರು. ಈ ಕಾರಣಕ್ಕೆ ದಾಳಿ ಮಾಡಿ, ಸಮನ್ಸ್ ನೀಡಿದ್ದರು ಎಂದು ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ ಶಿವಕುಮಾರ್ ನುಡಿದರು.

ನಾನು ಯಾವುದೇ ಭ್ರಷ್ಟಾಚಾರದಲ್ಲಿ ಭಾಗಿಯಾಗಿಲ್ಲ. ಕಳೆದ ಮೂರು ದಶಕದಿಂದಲೂ ರಾಜಕಾರಣ ಮಾಡುತ್ತಾ ಬಂದಿದ್ದೇನೆ. ಮಂತ್ರಿಯಾದಾಗಲೂ ನನ್ನ ಮೇಲೆ ಆರೋಪಗಳಿಲ್ಲವೆಂದು, ಚಿತ್ರದುರ್ಗದಲ್ಲಿ ಸುದ್ದಿಗಾರರ ಜತೆ ಮಾತನಾಡಿದರು. ನನ್ನ ಮೇಲೆ ಯಾವ ಕಮಿಷನ್ ತನಿಖೆಯೂ ನಡೆದಿಲ್ಲ. ಮಾಡಿರುವ ತನಿಖೆಗಳೆಲ್ಲವೂ ಕೂಡಾ ಮುಗಿದಿವೆ ಎಂದರು. ಈಗಾಗಲೇ ಸಮನ್ಸ್ ಜಾರಿಯಾಗಿದ್ದು, ಕಾನೂನಿಗೆ ಗೌರವ ನೀಡಿ ಉತ್ತರಿಸುತ್ತೇನೆ ಎಂದು ಹೇಳಿದರು.

ಕಾಂಗ್ರೆಸ್ ದೇಶ ವಿರೋಧಿ ಎಂಬ ಪ್ರಹ್ಲಾದ್ ಜೋಷಿ ಹೇಳಿಕೆಗೆ ಪ್ರತಿಕ್ರಿಯಿಸಿ, ಹೆಗಲ ಮೇಲಿನ ಶಾಲು ತೋರಿಸಿ ಇದು ಬಾವುಟ. ಕಾಂಗ್ರೆಸ್ ನವರಿಗೆ ಮಾತ್ರ ಇದು ಇರುವುದು ಬೇರೆ ಯಾರಿಗೂ ಇಲ್ಲ. ಇದೊಂದೆ ಉತ್ತರ ಎಂದು ಪ್ರಹ್ಲಾದ್ ಜೋಷಿಗೆ ತಿರುಗೇಟು ನೀಡಿದರು.

Related