ಬೆಂಗಳೂರು: ಲೋಕಸಭಾ ಚುನಾವಣೆ ಬೆನ್ನಲ್ಲೇ ಕರ್ನಾಟಕ ರಾಜ್ಯದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಐಟಿ ನೋಟಿಸ್ ಜಾರಿ ಮಾಡಿದೆ.
ಇನ್ನು ಇದರ ಬಗ್ಗೆ ಡಿಕೆ ಶಿವಕುಮಾರ್ ಅವರ ಪ್ರತಿಕ್ರಿಯೆ ನೀಡಿ, ಐಟಿ ಅಧಿಕಾರಿಗಳು ನೋಟಿಸ್ ನೀಡಿರುವುದು ನನಗೆ ಶಾಕ್ ಆಗಿದೆ ಎಂದು ಹೇಳಿದರು. ಬಗೆಹರಿಯದ ವಿಚಾರಕ್ಕೆ ನನಗೆ ಐಟಿ ನೋಟಿಸ್ ನೀಡಿದ್ದಾರೆ ಎಂದು ಹೇಳಿದರು.
ಚುನಾವಣೆ ಹೊಸ್ತಿನಲ್ಲಿ ಬಿಜೆಪಿ ನಾಯಕರುಗಳು ನಮ್ಮ ಕಾಂಗ್ರೆಸ್ನವರ ಮೇಲೆ ಬೇಕು ಅಂತಲೇ ಟಾರ್ಗೆಟ್ ಮಾಡಿ ನಮ್ಮ ಮೇಲೆ ಐಟಿ ದಾಳಿ ಮಾಡಿಸುತ್ತಿದ್ದಾರೆ ಎಂದು ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ನಾಯಕರ ಮೇಲೂ ಸಿಬಿಐ ತನಿಖೆ ನಡೆಯುತ್ತಿದೆ ಆದ್ರೆ ಯಾವ ಬಿಜೆಪಿ ನಾಯಕರನ್ನೂ ವಿಚಾರಣೆಗೆ ಕರೆಯುತ್ತಿಲ್ಲ ಕೇವಲ ಕಾಂಗ್ರೆಸ್ ನಾಯಕರನ್ನು ಮಾತ್ರ ಟಾರ್ಗೆಟ್ ಮಾಡ್ತಿದ್ದಾರೆ ಬಿಜೆಪಿ ನಾಯಕರಿಗೆ ಸೋಲಿನ ಭೀತಿ ಎದುರಾಗಿದೆ ಹಾಗಾಗಿ ಈ ನೋಟಿಸ್ ನೀಡುವ ಮೂಲಕ ಹೆದರಿಸುವ ಪ್ರಯತ್ನ ಮಾಡ್ತಿದ್ದಾರೆ ಎಂದರು.