ನಾನು ಸಿಎಂ ಆಗಿದ್ದಾಗ 25 ಕೋಟಿ ಅನುದಾನ ಕೊಟ್ಟಿದ್ದೇನೆ: ಮಾಜಿ ಸಿಎಂ

ನಾನು ಸಿಎಂ ಆಗಿದ್ದಾಗ 25 ಕೋಟಿ ಅನುದಾನ ಕೊಟ್ಟಿದ್ದೇನೆ: ಮಾಜಿ ಸಿಎಂ

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಈಗಾಗಲೇ ಅಧಿಕಾರಕ್ಕೆ ಬಂದು 8 ತಿಂಗಳು ತುಂಬುತ್ತಾ ಬಂದರೂ ಕೂಡ ಅಭಿವೃದ್ಧಿ ಕೆಲಸಗಳನ್ನು ಮಾಡಿಲ್ಲ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅತೃಪ್ತಿ ಶಮನಕ್ಕೆ 25 ಕೋಟಿ ರೂಪಾಯಿ ಅನುದಾನ ಕೊಡುವುದಾಗಿ ರಾಜ್ಯ ಕಾಂಗ್ರೆಸ್ ಸರ್ಕಾರ ಹೇಳಿತ್ತು. ಆದರೆ, ಈವರೆಗೂ ಅನುದಾನ ಕೊಟ್ಟಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್ ಶಾಸಕರಿಗೆ ಅನುದಾನ ಕೊಟ್ಟರೆ, ನಮ್ಮ ಶಾಸಕರಿಗೂ ಕೊಡಬೇಕು. ನಾನು ಸಿಎಂ ಆಗಿದ್ದಾಗ 25 ಕೋಟಿ ರೂ. ಅನುದಾನವನ್ನು ಕೊಟ್ಟಿದ್ದೇನೆ. ಹಾಗಾದರೆ ಇವರು ಈಗ ಎಷ್ಟು ಕೊಡಬೇಕು ಕಾಂಗ್ರೆಸ್​​​ ಶಾಸಕರಿಗೆ? ಇವರ ಯೋಗ್ಯತೆಗೆ ಸಣ್ಣ ಬೋರ್​ವೆಲ್ ಹಾಕಿಲ್ಲ ಎಂದು ಟೀಕಿಸಿದರು.

ಎಲ್ಲಾ ವಿಚಾರಗಳಲ್ಲಿಯೂ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುತ್ತಿದ್ದಾರೆ. ಅನುದಾನದ ಬಗ್ಗೆ ಕೇಂದ್ರದವರು ಚರ್ಚೆಗೆ ಬರಲಿ ಎಂಬ ಸವಾಲು ಹಾಕುತ್ತಾರೆ. ಅದು ಆಗದ ವಿಚಾರ ಎಂಬುದು ಅವರಿಗೆ ಗೊತ್ತಿದೆ. ಅದಕ್ಕೇ ಹಾಗೆ ಹೇಳುತ್ತಿದ್ದಾರೆ ಎಂದು ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದರು.

 

Related