ಪಕ್ಷಭೇದ ಮರೆತು ಕೆಲಸ ಮಾಡಿದ್ದೇನೆ: ಡಿಸಿಎಂ

ಪಕ್ಷಭೇದ ಮರೆತು ಕೆಲಸ ಮಾಡಿದ್ದೇನೆ: ಡಿಸಿಎಂ

ಕನಕಪುರ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಇಂದು (ಸೋಮವಾರ ಏಪ್ರಿಲ್ 22) ರಂದು ಕನಕಪುರದಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿಕೆ‌ ಸುರೇಶ್‌ ಅವರ ಪರವಾಗಿ ಭರ್ಜರಿ ಮತ ಯಾಚನೆ ಮಾಡಿದ್ದಾರೆ.

ಇನ್ನು ಈ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ತಾಲೂಕಿನ ಮಗನಾಗಿ, ನಿಮ್ಮ ಸಹೋದರ, ಸ್ನೇಹಿತನಾಗಿ ತಾಲೂಕಿನ ಅಭಿವೃದ್ಧಿಗೆ ಹಗಲು ರಾತ್ರಿ ಶ್ರಮಿಸುತ್ತಿದ್ದೇನೆ. ಪಕ್ಷಭೇದ ಮರೆತು ಕೆಲಸ ಮಾಡಿದ್ದೇನೆ. ಅಭಿವೃದ್ಧಿ ವಿಚಾರದಲ್ಲಿ ಇಡೀ ರಾಜ್ಯಕ್ಕೆ ಮಾದರಿಯಾಗುವ ರೀತಿಯಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ. ನಿಮ್ಮೆಲ್ಲರ ಆಶೀರ್ವಾದದಿಂದ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ಉಪಮುಖ್ಯಮಂತ್ರಿಯಾಗಿದ್ದಾರೆ.

ಡಿ.ಕೆ. ಶಿವಕುಮಾರ್ ಅವರನ್ನು ಏನಾದರೂ ಮಾಡಿ ಕಟ್ಟಿಹಾಕಬೇಕು ಎಂದು ಬಿಜೆಪಿ ಹಾಗೂ ಜೆಡಿಎಸ್ ಒಂದಾಗಿದೆ. ನಿಮ್ಮ ಆಶೀರ್ವಾದ ಇರುವವರೆಗೂ ಯಾರು ಏನು ಮಾಡಲು ಸಾಧ್ಯವಿಲ್ಲ. ಕೆಲವರಿಗೆ ಚುನಾವಣೆ ಸಂದರ್ಭದಲ್ಲಿ ಮಾತ್ರ ರಾಮನಗರ ಜಿಲ್ಲೆ ನೆನಪಾಗುತ್ತದೆ. ರಾಮನಗರ ಜಿಲ್ಲೆಗೆ ನೆಂಟರಂತೆ ಬಂದು ಹೋಗುತ್ತಾರೆ. ನಿಮ್ಮ ಕಷ್ಟ ಸುಖಕ್ಕೆ ಯಾರೂ ಬುರುವುದಿಲ್ಲ. ನಿಮ್ಮ ಕಷ್ಟ ಸುಖಕ್ಕೆ ಹೆಗಲುಕೊಟ್ಟು ಯಾರಾದರೂ ನಿಂತಿದ್ದರೆ ಅದು ನಾನು ಮತ್ತು ಡಿ.ಕೆ. ಶಿವಕುಮಾರ್ ಮಾತ್ರ.

ಕನಕಪುರದಲ್ಲಿ ದೊಡ್ಡ ಅನ್ಯಾಯ ನಡೆಯುತ್ತಿದೆ, ಉಸಿರುಗಟ್ಟುವ ವಾತಾವರಣ ನಿರ್ಮಿಸಿದ್ದೇವೆ ಎಂಬ ರೀತಿಯಲ್ಲಿ ಮಾಧ್ಯಮಗಳಲ್ಲಿ ಪ್ರಚಾರ ಮಾಡಲಾಗುತ್ತಿದೆ. ಬಿಜೆಪಿ ಹಾಗೂ ಜೆಡಿಎಸ್ ನವರು ಕನಕಪುರವನ್ನು ಯಾವ ರೀತಿ ಕೆಟ್ಟ ಬಿಂಬಿಸುತ್ತಿದ್ದಾರೆ ಇಲ್ಲಿನ ಜನ ಈ ಬಗ್ಗೆ ಆಲೋಚಿಸಬೇಕು. ಡಿ.ಕೆ. ಶಿವಕುಮಾರ್ ಅವರ ಏಳಿಗೆ ಹಾಗೂ ಈ ಕ್ಷೇತ್ರದ ಅಭಿವೃದ್ಧಿ ಸಹಿಸಲಾಗದೆ ಅಪಪ್ರಚಾರ ಮಾಡುತ್ತಿದ್ದಾರೆ. ನಾವು ಯಾರಿಗೆ ಯಾವ ತೊಂದರೆ ನೀಡಿದ್ದೇವೆ ಎಂದು ಇಲ್ಲಿರುವ ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತರು ಹೇಳಬೇಕು.

ನಮ್ಮ ಸರ್ಕಾರ ಐದು ಗ್ಯಾರಂಟಿ ಯೋಜನೆ ನೀಡಿದೆ. ಬಿಜೆಪಿಯವರು ಈ ಯೋಜನೆಗೆ ವಿರುದ್ಧವಾಗಿದ್ದಾರೆ. ನಮ್ಮ ಯೋಜನೆ ಸರಿಯಾಗಿಲ್ಲವಾದರೆ ಅವರ ಕಾರ್ಯಕರ್ತರಿಗೆ ಈ ಯೋಜನೆ ಲಾಭ ಪಡೆಯದಂತೆ ಹೇಳಲಿ. ನಾವು ಗ್ಯಾರಂಟಿ ಕೊಟ್ಟು ಮಹಿಳೆಯರನ್ನು ದಾರಿ ತಪ್ಪಿಸಿದ್ದರೆ ಈ ಗ್ಯಾರಂಟಿ ಪ್ರಯೋಜನ ಪಡೆಯಬೇಡಿ ಎಂದು ಅವರು ಕರೆ ನೀಡಲಿ. ಅವರಿಗೆ ಗ್ಯಾರಂಟಿ ಯೋಜನೆಗಳು ಬಡವರು, ರೈತರಿಗೆ ನೆರವಾಗುತ್ತಿರುವುದನ್ನು ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ.

2ನೇ ಕ್ರಮಸಂಖ್ಯೆಯ ಹಸ್ತದ ಗುರುತಿಗೆ ನಿಮ್ಮ ಅಮೂಲ್ಯವಾದ ಮತ ಹಾಕಿ. ಇಲ್ಲಿ ಕೇವಲ ನಾನು ಮಾತ್ರ ಅಭ್ಯರ್ಥಿಯಲ್ಲ. ಈ ಕ್ಷೇತ್ರದ ಪ್ರತಿಯೊಬ್ಬ ಮತದಾರ ಕೂಡ ಇಲ್ಲಿ ಅಭ್ಯರ್ಥಿಯಾಗಿದ್ದಾರೆ. ನೀವು ನಿಮ್ಮ ಮಗನಂತೆ ಸಾಕಿ, ಸಲಹಿದ್ದೀರಿ. ಇನ್ನಷ್ಟು ಪೋಷಣೆ ಮಾಡುತ್ತೀರಿ ಎಂದು ನಾನು ನಂಬಿದ್ದೇನೆ ಎಂದುರು.

Related