ನಾನು ಕೂಡ ಒಬ್ಬ ಹಿಂದೂ, ಎಲ್ಲಾ ಧರ್ಮದ ದೇವರನ್ನು ಪೂಜಿಸುತ್ತೇನೆ: ಸಿಎಂ

ನಾನು ಕೂಡ ಒಬ್ಬ ಹಿಂದೂ, ಎಲ್ಲಾ ಧರ್ಮದ ದೇವರನ್ನು ಪೂಜಿಸುತ್ತೇನೆ: ಸಿಎಂ

ಬೆಂಗಳೂರು: ನಾನು ಕೂಡ ಒಬ್ಬ ಹಿಂದು. ನಾನು ಎಲ್ಲಾ ಜಾತಿಯ ದೇವರುಗಳನ್ನು ಪೂಜಿಸುತ್ತೇನೆ. ಎಲ್ಲಾ ಜಾತಿಯ ಧರ್ಮವನ್ನು ನಂಬುತ್ತೇನೆ. ಎಲ್ಲಾ ಜಾತಿಯ ಜನರು ನನ್ನ ಸ್ನೇಹಿತರಿದ್ದಾರೆ ಹಾಗಾಗಿ ನಾನು ಹಿಂದೂ ವಿರೋಧಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ನಗರದಲ್ಲಿಂದು ಲಲಿತ ಅಶೋಕ್ ಹೋಟೆಲ್ ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮ ಒಂದರಲ್ಲಿ ಮಾತನಾಡಿದ ಅವರು, ಭಾಗವಧ್ವಜ ಹಾರಿಸಲು ನಮ್ಮ ವಿರೋಧವಿಲ್ಲ. ಬಿಜೆಪಿಯವರು ಸುಮ್ಮಸುಮ್ಮನೆ ಕೋಮು ಗಲಿಬೆ ಎಬ್ಬಿಸಲು ಮುಂದಾಗುತ್ತಿದ್ದರೆ. ಚಿಕ್ಕಪುಟ್ಟ ವಿಷಯಕ್ಕೆಲ್ಲ ದೊಡ್ಡ ದೊಡ್ಡ ಹೋರಾಟಗಳನ್ನು ಮಾಡುತ್ತಿದ್ದಾರೆ. ಇದೆಲ್ಲ ನಮ್ಮ ರಾಜ್ಯದಲ್ಲಿ ಆಗಬಾರದು ಎಂದು ಹೇಳಿದರು.

ಇನ್ನು ಬಿಜೆಪಿಯವರು ಅನಗತ್ಯವಾಗಿ ಸಮಸ್ಯೆ ಸೃಷ್ಟಿಸುತ್ತಿದ್ದಾರೆ. ಭಾಗವಧ್ವಜ ಹಾರಿಸಲು ನಮ್ಮ ವಿರೋಧವಿಲ್ಲ. ರಾಷ್ಟ್ರ ಧ್ವಜವನ್ನು ಹಾರಿಸಲು ಅವರು ಅನುಮತಿ ಪಡೆದಿದ್ದು ಅದನ್ನೇ ಹಾರಿಸಬೇಕು. ಜಿಲ್ಲಾಡಳಿತ ಅದಕ್ಕೆ ಕ್ರಮ ವಹಿಸಿದೆ ಎಂದರು.

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹಾಗೂ ಜೆಡಿ ಎಸ್. ಮುಖಂಡ ಹೆಚ್.ಡಿ.ಕುಮಾರಸ್ವಾಮಿಯವರು ಮಂಡ್ಯಕ್ಕೆ ಭೇಟಿ ನೀಡಿ ಪ್ರಚೋದನೆ ನೀಡುತ್ತಿದ್ದಾರೆ. ಪ್ರಚೋದನೆ ಯಾಕೆ ನೀಡುತ್ತಿದ್ದಾರೆ ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು ಚುನಾವಣೆ ಹತ್ತಿರ ಬರುತ್ತಿದ್ದು, ಅದಕ್ಕಾಗಿ ಈ ರೀತಿ ಮಾಡುತ್ತಿದ್ದಾರೆ ಎಂದರು

 

Related