ನಾನು ಕಾವೇರಿಗಾಗಿ ಮೋದಿಯನ್ನೇ ನಂಬಿದ್ದೇನೆ: ಮಾಜಿ ಪ್ರಧಾನಿ

ನಾನು ಕಾವೇರಿಗಾಗಿ ಮೋದಿಯನ್ನೇ ನಂಬಿದ್ದೇನೆ: ಮಾಜಿ ಪ್ರಧಾನಿ

ಕೊರಟಗೆರೆ: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕ ರಾಜ್ಯದಲ್ಲಿ ಸುಮಾರು 28 ಕ್ಷೇತ್ರಕ್ಕೆ 28 ಕ್ಷೇತ್ರ ನಮ್ಮ ಮೈತ್ರಿ ಅಭ್ಯರ್ಥಿಗಳು ಗೆಲ್ಲುತ್ತಾರೆ ಎಂದು ಮಾಜಿ ಪ್ರಧಾನಿ ದೇವೇಗೌಡ ಅವರು ಹೇಳಿದ್ದಾರೆ.

ಕೊರಟಗೆರೆ ಪಟ್ಟಣದ ಊರುಗೆರೆ ಸಮೀಪ ಖಾಸಗಿ ಕಲ್ಯಾಣ ಮಂಟಪದಲ್ಲಿ ಭಾರತೀಯ ಜನತಾ ಪಾರ್ಟಿ ಮತ್ತು ಜನತ್ಯತೀತ ಜನತಾ ದಳ ಪಕ್ಷದಿಂದ ಏರ್ಪಡಿಸಲಾಗಿದೆ ಕಾರ್ಯಕರ್ತರ ಬೃಹತ್ ಸಮಾವೇಶ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ರಾಜ್ಯದ ಕಾವೇರಿ ವಿಚಾರಣೆಯಾಗಿ ನಾನಿಗಾಗಲೇ ಪ್ರಧಾನಿ ನರೇಂದ್ರಮೋದಿ ಅವರತ್ರ ಮಾತುಕತೆ ನಡೆಸಿದ್ದೇನೆ. ನಾನು ಕಾವೇರಿಗಾಗಿ ಮೋದಿಯನ್ನು ನಂಬಿದ್ದೇನೆ ಎಂದು ಹೇಳಿದರು.

ಸಾರಿ ಸೂಮಾರು ನಾನು 1962ರಿಂದ ಕಾವೇರಿ ನೀರಿಗಾಗಿ ಹೋರಾಟ ಮಾಡಿದ್ದೇನೆ. ವಿ.ಸೋಮಣ್ಣ ಗೆದ್ದರೆ ತಲೆ ಎತ್ತಿ ನಾನು ನರೇಂದ್ರ ಮೋದಿಯವರಿಗೆ ಕಾವೇರಿ ನೀರು ಮತ್ತು ಮೇಕೆದಾಟಿನ ಬಗ್ಗೆ ಪ್ರಶ್ನೆ ಮಾಡುವೆ. ತಮಿಳುನಾಡಿನ ಸ್ಟಾಲಿನ್ ನೀರಿನ ವೈರತ್ವದ ಬಗ್ಗೆ ಪ್ರಧಾನಿ ಮೋದಿಗೂ ಅರ್ಥವಾಗಿದೆ. ನಾನು 2019ರಲ್ಲಿ ಸೋತಿದ್ದಕ್ಕೆ ವ್ಯಥೆಯಿಲ್ಲ, ಆದರೆ ಈ ಬಾರಿ ವಿ.ಸೋಮಣ್ಣ ಗೆದ್ದು ದೆಹಲಿಗೆ ಹೋಗಬೇಕಿದೆ ಎಂದು ಮನವಿ ಮಾಡಿದರು.

 

Related