ನಾನು ಅಭಿವೃದ್ಧಿ ಕಾರ್ಯದಲ್ಲಿ ತೊಡಗಿದ್ದೆ ತಪ್ಪಾ: ಪ್ರತಾಪ್ ಸಿಂಹ

ನಾನು ಅಭಿವೃದ್ಧಿ ಕಾರ್ಯದಲ್ಲಿ ತೊಡಗಿದ್ದೆ ತಪ್ಪಾ: ಪ್ರತಾಪ್ ಸಿಂಹ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಮೈಸೂರು ಜಿಲ್ಲೆಯ ಬಿಜೆಪಿಯ ಸಂಸದರಾದ ಪ್ರತಾಪ್ ಸಿಂಹ ಅವರು ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನ ಹುಣಸೂರಿನಲ್ಲಿ ಪ್ರತಾಪ್ ಸಿಂಹ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸಿದ್ದರಾಮಯ್ಯನವರೇ ನಿಮಗೆ ನಿಜವಾಗ್ಲೂ ಧಮ್ಮ ತಾಕತ್ತು ಇದ್ರೆ ಅಭಿವೃದ್ಧಿ ಇಟ್ಕೊಂಡು ರಾಜಕಾರಣ ಮಾಡಿ, ದ್ವೇಷ ದ್ವೇಷದ ರಾಜಕಾರಣ ಮಾಡಬೇಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಕೇವಲ ಬಿಜೆಪಿ ಪಕ್ಷದಲ್ಲಿ ಪ್ರತಾಪ್ ಸಿಂಹನನ್ನು ಯಾಕೆ ಟಾರ್ಗೆಟ್ ಮಾಡಿರುವುದೆಂದು ನಾನು ಪ್ರಶ್ನೆ ಮಾಡುತ್ತೇನೆ. ನಾನು ಸೋಮಾರಿ ಸಿದ್ದನ ಹಾಗೆ ಇಲ್ಲ. ಅಭಿವೃದ್ಧಿ ಕಾರ್ಯದಲ್ಲಿ ಕೈಗೊಂಡಿದ್ದೆ ತಪ್ಪಾ. ಅಭಿವೃದ್ಧಿ ಕಾರ್ಯಕ್ರಮವನ್ನು ಮಾಡುವ ಜನರಿಗೆ ಏಕೆ ಈ ರೀತಿ ಟಾರ್ಗೆಟ್ ಮಾಡಿ ತೊಂದರೆ ಕೊಡುತ್ತದೆ ಎಂದು ಪ್ರಶ್ನಿಸಿದರು.

ಕಾಂಗ್ರೆಸ್‌ ನಲ್ಲಿ ಕಾರ್ಯಕರ್ತನಿಂದ ಹಿಡಿದು ಸಿಎಂ ಪುತ್ರನವರೆಗೂ ನನ್ನ ಟಾರ್ಗೆಟ್ ಮಾಡಲಾಗುತ್ತಿದೆ. ನನ್ನನ್ನು ಭಯೋತ್ಪಾದಕ ಅಂತಾ ಬಿಂಬಿಸುವ ಪ್ರಯತ್ನ ನಡೆಯುತ್ತಿದೆ. ನನಗೆ ಮುಸ್ಲಿಂ ವೇಷ ತೊಡಿಸಿ ಕೈಯಲ್ಲಿ ಬಾಂಬ್ ಕೊಟ್ಟಿದ್ದರು. ನನ್ನ ಸಹೋದರ ಮರಗಳ್ಳ ಅಂತ ಕಾಂಗ್ರೆಸ್ಸಿಗರು ಪೋಸ್ಟ್ ಮಾಡಿದ್ದರು ಎಂದು ಸಂಸದ ಪ್ರತಾಪ್ ಸಿಂಹ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

 

Related