ಪಕ್ಷ ಏನು ಜವಾಬ್ದಾರಿ ನೀಡುತ್ತೋ‌ ಅದನ್ನ ನಿಭಾಯಿಸುತ್ತೆನೆ: ಜಗದೀಶ್ ಶೆಟ್ಟರ್

ಪಕ್ಷ ಏನು ಜವಾಬ್ದಾರಿ ನೀಡುತ್ತೋ‌ ಅದನ್ನ ನಿಭಾಯಿಸುತ್ತೆನೆ: ಜಗದೀಶ್ ಶೆಟ್ಟರ್

ಕೊಪ್ಪಳ:  2024 ರ ಲೋಕಸಭೆ ಚುನಾವಣೆಗೆ ಜಗದೀಶ್ ಶೆಟ್ಟರ್ ಸ್ಪರ್ಧೆ ಮಾಡುತ್ತಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. 2024ರಲ್ಲಿ ಹುಬ್ಬಳ್ಳಿ-ಧಾರವಾಡ ಕ್ಷೇತ್ರದಿಂದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಿರುದ್ಧ ಕಣಕ್ಕಿಳಿಯುತ್ತಾರೆ ಎನ್ನುವ ಮಾತುಗಳು ಕೇಳಿಬರುತ್ತಿದ್ದು, ಇದೀಗ ಇದಕ್ಕೆ ಸ್ವತಃ ವಿಧಾನ ಪರಿಷತ್ ಸದಸ್ಯ ಜಗದೀಶ್ ಶೆಟ್ಟರ್​ ಪ್ರತಿಕ್ರಿಯಿಸಿ ಸ್ಪಷ್ಟನೆ ನೀಡಿದ್ದಾರೆ. ಕೊಪ್ಪಳದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕಮಾಂಡ್ ನಾಯಕರು ಏನು ಸೂಚನೆ ಕೊಡುತ್ತಾರೋ ಅದನ್ನು ಪಾಲನೆ ಮಾಡುತ್ತೇನೆ. ಪಕ್ಷ ಏನು ಜವಾಬ್ದಾರಿ ನೀಡುತ್ತೋ‌ ಅದನ್ನ ನಿಭಾಯಿಸುತ್ತೆನೆ. ಲೋಕಸಭೆ ಚುನಾವಣೆಯ ಬಗ್ಗೆ ಎಲ್ಲೂ ಚರ್ಚೆ ಆಗಿಲ್ಲ ಎಂದು ಹೇಳಿದರು. ಈ ಮೂಲಕ ಎಲ್ಲಾ ಅಂತೆ-ಕಂತೆಗಳಿಗೆ ತೆರೆ ಎಳೆದರು.

 

Related