ಲೋಕ ಸಮರಕ್ಕೆ ಕಾಂಗ್ರೆಸ್ ಪಕ್ಷ ಲಕ್ಷ್ಮಣ್ ಸವದಿ ಮಗನಿಗೆ ಟಿಕೆಟ್ ನೀಡುತ್ತಾ?

ಲೋಕ ಸಮರಕ್ಕೆ ಕಾಂಗ್ರೆಸ್ ಪಕ್ಷ ಲಕ್ಷ್ಮಣ್ ಸವದಿ ಮಗನಿಗೆ ಟಿಕೆಟ್ ನೀಡುತ್ತಾ?

ಬೆಳಗಾವಿ: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ ಅಂಗಳದಲ್ಲಿ ಯಾವ ಕ್ಷೇತ್ರಕ್ಕೆ ಯಾವ ಅಭ್ಯರ್ಥಿಯನ್ನು ನೇಮಕ ಮಾಡಬೇಕೆಂದು ಅಭ್ಯರ್ಥಿಗಳ ಬಗ್ಗೆ ತೂಗಿ ಅಳೆದು ಅಭ್ಯರ್ಥಿಗಳ ಹೆಸರನ್ನು ಫೈನಲ್ ಮಾಡಲಾಗುತ್ತಿದೆ ಎಂದು ತಿಳಿದುಬಂದಿದೆ.

ಈಗಾಗಲೇ ಕಾಂಗ್ರೆಸ್ ಅಂಗಳದಲ್ಲಿ ಲೋಕಸಭಾ ಸಮರಕ್ಕೆ ಅಭ್ಯರ್ಥಿಗಳ ಹೆಸರು ಫೈನಲ್ ಲಿಸ್ಟ್ ಮಾಡಲಾಗುತ್ತಿತ್ತು ಬೆಳಗಾವಿ ಕ್ಷೇತ್ರದಲ್ಲಿ ಈ ಬಾರಿ ಲಕ್ಷ್ಮಣ್ ಸವದಿಯನ್ನು ಪಕ್ಷದಲ್ಲಿ ಉಳಿಸಿಕೊಳ್ಳಲು ಲೋಕಸಭಾ ಚುನಾವಣೆಗೆ ಲಕ್ಷ್ಮಣ್ ಸವದಿಗೆ ಟಿಕೆಟ್ ಕೊಡುವ ನಿರೀಕ್ಷೆ ಇದೆ ಎಂದು ಹೇಳಲಾಗುತ್ತಿದೆ.

ಹೌದು, ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ಲಕ್ಷ್ಮಣ ಸವದಿ ಪುತ್ರ ಚಿದಾನಂದ ಸವದಿ‌ಗೆ ಟಿಕೆಟ್ ನೀಡುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಅಲ್ಲದೆ ಲಕ್ಷ್ಮಣ ಸವದಿ ಪುತ್ರ ಸ್ಪರ್ಧೆ ಮಾಡಿದ್ರೇ ಸುಲಭವಾಗಿ ಚಿಕ್ಕೋಡಿ ಗೆಲ್ಲಬಹುದು. ಚಿಕ್ಕೋಡಿ ಲೋಕಸಭಾ ಕ್ಷೇತ್ರ ಸೇರಿದಂತೆ ಅಕ್ಕಪಕ್ಕದ ಕ್ಷೇತ್ರದ ಮೇಲೆಯೂ ಸವದಿ ಪ್ರಭಾವ ಇದೆ.

ಮಗನಿಗೆ ಟಿಕೆಟ್ ಕೊಟ್ಟಿದ್ದೆ ಆದ್ರೆ ಸವದಿ ಆ್ಯಕ್ಟೀವ್ ಆಗಿ ಕೆಲಸ ಮಾಡಿ ಇನ್ನಷ್ಟು ಸೀಟ್ ಗೆಲ್ಲಲು ಸಹಕಾರಿಯಾಗಲಿದ್ದಾರೆ. ಚಿದಾನಂದ ಸವದಿಗೆ ಟಿಕೆಟ್ ಕೊಟ್ಟರೆ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಂತೆ. ಬಿಜೆಪಿ ನಾಯಕರು ಸವದಿ ಸೆಳೆಯುವುದಕ್ಕೆ ಸುಲಭವಾಗಿ ಬ್ರೇಕ್ ಹಾಕಿದಂತಾಗುತ್ತೆ. ಸವದಿ ಕಾಂಗ್ರೆಸ್ ನಲ್ಲಿ ಇನ್ನಷ್ಟು ಆ್ಯಕ್ಟೀವ್ ಆಗಿ ಕೆಲಸ ಮಾಡಲು ಅನುಕೂಲವಾಗುತ್ತೆ ಎಂದು ಕಾಂಗ್ರೆಸ್ ಚಿಂತಿಸುತ್ತಿದ್ದು ಚಿದಾನಂದ ಸವದಿಗೆ ಟಿಕೆಟ್ ನೀಡುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

 

Related