ಕ್ರಮ ಕೈಗೊಳ್ಳದಿದ್ದರೆ ಲೋಕಸಭಾ ಸದಸ್ಯತ್ವ ತ್ಯಜಿಸುವೆ; ಡ್ಯಾನಿಶ್ ಅಲಿ

ಕ್ರಮ ಕೈಗೊಳ್ಳದಿದ್ದರೆ ಲೋಕಸಭಾ ಸದಸ್ಯತ್ವ ತ್ಯಜಿಸುವೆ; ಡ್ಯಾನಿಶ್ ಅಲಿ

ನವದೆಹಲಿ, ಸೆ. 23: ಲೋಕಸಭೆಯಲ್ಲಿ ತಮ್ಮ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಬಿಜೆಪಿ ಸಂಸದ ರಮೇಶ್ ಬಿಧುರಿ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಲೋಕಸಭಾ ಸದಸ್ಯತ್ವ ತ್ಯಜಿಸುವ ಬಗ್ಗೆ ಆಲೋಚನೆ ನಡೆಸುತ್ತಿರುವುದಾಗಿ ಬಹುಜನ ಸಮಾಜ ಪಕ್ಷದ ಸಂಸದ ಡ್ಯಾನಿಶ್ ಅಲಿ ಹೇಳಿದ್ದಾರೆ.

ಭಾರತದ ಚಂದ್ರಯಾನ-3 ರ ಯಶಸ್ಸಿನ ಚರ್ಚೆಯ ವೇಳೆ ಮಾತನಾಡಿದ ಬಿಜೆಪಿ ಸಂಸದ ರಮೇಶ್ ಬಿಧುರಿ ಅವರು ಡ್ಯಾನಿಶ್ ಅಲಿ ಅವರನ್ನು ಭಯೋತ್ಪಾದಕ, ಉಗ್ರಗಾಮಿ ಮತ್ತು ಪಿಂಪ್ ಎಂದು ನಿಂದಿಸಿದ್ದರು. ಈ ಕುರಿತು ಶುಕ್ರವಾರ ಬಹುಜನ ಸಮಾಜ ಪಕ್ಷದ ಸಂಸದ ಡ್ಯಾನಿಶ್ ಅಲಿ ಮಾತನಾಡಿ, ಬಿಜೆಪಿ ಸಂಸದನ ವಿರುದ್ದ ಕಿಡಿಕಾರಿದ ಡ್ಯಾನಿಶ್‌ ಅಲಿ, ದ್ವೇಷ ಭಾಷಣಗಳನ್ನು ಕೇಳಲು ಜನ ನನ್ನನ್ನು ಆಯ್ಕೆ ಮಾಡಿಲ್ಲ. ಇದನ್ನು ನಾನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ಈ ಸಂಬಂಧ ನಾನು ಸ್ಪೀಕರ್‌ಗೆ ಪತ್ರ ಬರೆದಿದ್ದೇನೆ. ಈ ಕುರಿತು ಸ್ಪೀಕರ್‌ ಅವರು ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಭಾವಿಸುತ್ತೇನೆ ಎಂದು ಡ್ಯಾನಿಶ್‌ ಅಲಿ ಹೇಳಿದ್ದಾರೆ.

ಇಡೀ ದೇಶವೇ ತಲೆ ತಗ್ಗಿಸುವಂತೆ ಅವರು ಮಾತನಾಡಿದ್ದಾರೆ. ಇದು ದ್ವೇಷದ ಭಾಷಣಕ್ಕಿಂತ ಕಡಿಮೆ ಇಲ್ಲ. ಇದು ಸದನದಲ್ಲಿ ನಡೆದ ದ್ವೇಷದ ಭಾಷಣವಾಗಿದೆ. ಇಷ್ಟು ದಿನ ಸಂಸತ್ತಿನ ಹೊರಗೆ ದ್ವೇಷ ಭಾಷಣಗಳನ್ನು ಮಾಡಲಾಗುತ್ತಿತ್ತು. ಆದರೆ ಈಗ ಬಿಜೆಪಿ ಸಂಸದ ಸದನದೊಳಗೇ ದ್ವೇಷ ಭಾಷಣ ಮಾಡಿದ್ದಾರೆ, ಬಿಜೆಪಿಯವರ ಮಾತು ಹಾಗೂ ನಡೆಯ ನಡುವೆ ವ್ಯತ್ಯಾಸವಿದೆ ಎಂದು ಡ್ಯಾನಿಶ್ ಅಲಿ ಅಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನೂ ತೀವ್ರ ವಾಗ್ದಾಳಿ ನಡೆಸಿದ ಡ್ಯಾನಿಶ್‌ ಅಲಿ, ಬಿಜೆಪಿ ಸಂಸದರು ಆರ್‌ ಎಸ್‌ ಎಸ್‌ ಶಾಖೆಗಳಲ್ಲಿ ದ್ವೇಷ ಭಾಷಣಗಳನ್ನು ಕಲಿಯುತ್ತಿದ್ದಾರೆಯೋ ಅಧವಾ ಪ್ರಧಾನಿ ನರೇಂದ್ರ ಮೋದಿ ಅವರ ನವ ಭಾರತದ ಹೊಸ ಪ್ರಯೋಗಾಯದಲ್ಲಿ ಕಲಿಯುತ್ತಿದ್ದಾರೆಯೋ ಎಂದು ಪ್ರಶ್ನಿಸಿದ್ದಾರೆ.

Related