ಮುಂಬರುವ ಲೋಕಸಭಾ ಚುನಾವಣೆಗೆ ರಾಜ್ಯ ಮಾತ್ರವಲ್ಲದೆ ಇಡೀ ದೇಶದಾದ್ಯಂತ ಎಲ್ಲಾ ಪಕ್ಷದ ಅಭ್ಯರ್ಥಿಗಳು ಭರ್ಜರಿ ಸಿದ್ಧತೆಗಳ ಜೊತೆಗೆ ಭರ್ಜರಿ ಪ್ರಚಾರವನ್ನು ಕೈಗೊಂಡಿದ್ದಾರೆ.
ಇನ್ನು ಕಳೆದ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಕರ್ನಾಟಕ ರಾಜ್ಯದಲ್ಲಿ 5 ಗ್ಯಾರಂಟಿಗಳನ್ನು ಘೋಷಿಸಿ ಅಧಿಕಾರದ ಗದ್ದುಗೆಯನ್ನು ಏರಿದ ಕಾಂಗ್ರೆಸ್ ಪಕ್ಷಕ್ಕೆ ಈ ಬಾರಿ ಲೋಕಸಭಾ ಚುನಾವಣೆ ಗೆಲ್ಲಲು ಇನ್ನಷ್ಟು ಗ್ಯಾರೆಂಟಿಗಳನ್ನು ಘೋಷಿಸುವ ಮೂಲಕ ಕೇಂದ್ರದಲ್ಲಿ ತನ್ನ ಅಧಿಕಾರದ ಗದ್ದುಗೆಯನ್ನು ಏರಲು ಕಾಂಗ್ರೆಸ್ ಪಕ್ಷ ಇಂದು ಪ್ರಣಾಳಿಕೆ ಯನ್ನು ಬಿಡುಗಡೆ ಮಾಡಿದೆ.
ಕಾಂಗ್ರೆಸ್ ಪಕ್ಷ ಬಿಡುಗಡೆ ಮಾಡಿದ ಪ್ರಣಾಳಿಕೆಯಲ್ಲಿ ಪಂಚ ನ್ಯಾಯ ಮತ್ತು 25 ಭರವಸೆಗಳನ್ನು ಭರವಸೆ ನೀಡಿದೆ.
ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ‘ಯುವ ನ್ಯಾಯ’, ‘ನಾರಿ ನ್ಯಾಯ’, ‘ಕಿಸಾನ್ ನ್ಯಾಯ’, ‘ಶ್ರಮಿಕ್ ನ್ಯಾಯ’ ಮತ್ತು ‘ಹಿಸ್ಸೆದಾರಿ ನ್ಯಾಯ’ ಹಾಗೂ ಖಾತರಿಗಳು ಸೇರಿದಂತೆ ಪಂಚ ನ್ಯಾಯ ಅಥವಾ ನ್ಯಾಯದ ಐದು ಸ್ತಂಭಗಳಿಗೆ ಒತ್ತು ನೀಡಿದೆ.
ಕಾಂಗ್ರೆಸ್ ಪಕ್ಷವು ದೇಶಾದ್ಯಂತ ಜಾತಿ ಆಧಾರಿತ ಜನಗಣತಿ ನಡೆಸುವುದಾಗಿ ಭರವಸೆ ನೀಡಿದೆ. 2024ರಲ್ಲಿ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದರೆ ಬಡ ಕುಟುಂಬದ ಮಹಿಳೆಯರಿಗೆ ಪ್ರತಿ ವರ್ಷ ಲಕ್ಷ ರೂ.ಗಳ ನೆರವು ನೀಡುವುದಾಗಿ ತಿಳಿಸಿದ ಅವರು ರೈತರ ಸಾಲ ಮನ್ನಾ ಮಾಡುವುದಾಗಿ ಭರವಸೆ ನೀಡಿದರು.
ಯುವ ನ್ಯಾಯ ಅಡಿಯಲ್ಲಿ ಪಕ್ಷವು ಮಾತನಾಡಿರುವ ಐದು ಖಾತರಿಗಳಲ್ಲಿ 30 ಲಕ್ಷ ಸರ್ಕಾರಿ ಉದ್ಯೋಗಗಳನ್ನು ಒದಗಿಸುವ ಭರವಸೆ ಮತ್ತು ಒಂದು ವರ್ಷದವರೆಗೆ ಅಪ್ರೆಂಟಿಸ್ಶಿಪ್ ಕಾರ್ಯಕ್ರಮದಡಿಯಲ್ಲಿ ಯುವಕರಿಗೆ 1 ಲಕ್ಷ ರೂ. ನೀಡುವುದಾಗಿ ತಿಳಿಸಿದ್ದಾರೆ.
ಸ್ವಾಮಿನಾಥನ್ ಆಯೋಗದ ಶಿಫಾರಸಿನಂತೆ ಪ್ರತಿ ವರ್ಷ ಎಂಎಸ್ಪಿ ಘೋಷಿಸುವ ಕಾನೂನು ಖಾತರಿ ನೀಡುವುದಾಗಿ ಘೋಷಿಸಿದೆ.
ಕಾರ್ಮಿಕ ನ್ಯಾಯ ಅಡಿಯಲ್ಲಿ, ಕಾರ್ಮಿಕರಿಗೆ ಆರೋಗ್ಯದ ಹಕ್ಕನ್ನು ಒದಗಿಸುವುದು, ದಿನಕ್ಕೆ ಕನಿಷ್ಠ 400 ರೂ. ವೇತನ ಮತ್ತು ನಗರ ಉದ್ಯೋಗ ಖಾತರಿಯನ್ನು ಖಚಿತಪಡಿಸುವುದಾಗಿ ಭರವಸೆ ನೀಡಿದ್ದಾರೆ.
ಕೇಂದ್ರ ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ ಶೇ 50ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಪ್ರಣಾಳಿಕೆಯಲ್ಲಿ ಹೇಳಲಾಗಿದೆ.