ಅಕ್ರಮ ಕಟ್ಟಡ ತೆರವು

ಅಕ್ರಮ ಕಟ್ಟಡ ತೆರವು

ವಿಜಯಪುರ : ನಗರದಲ್ಲಿ ರಸ್ತೆ ಒತ್ತುವರಿ ಮಾಡಿಕೊಂಡಿದ್ದ ಅಕ್ರಮ ಕಟ್ಟಡ ತೆರವು ಕಾರ್ಯಾಚರಣೆಯನ್ನು ಮಹಾನಗರ ಪಾಲಿಕೆ ಅಧಿಕಾರಿಗಳು ಮಾಡಿದರು.

ನಗರದ ಸರಾಫ್ ಬಜಾರ ಪರಿಸರದ ರಸ್ತೆಗಳಲ್ಲಿ ಅನಧಿಕೃತವಾಗಿ ತೆರೆದಿದ್ದ ತಳ್ಳುವ ಗಾಡಿಗಳು, ರಸ್ತೆ ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ನಿರ್ಮಾಣ ಮಾಡಿದ್ದ ಅಂಗಡಿಗಳ ತೆರವು ಮಾಡಿದರು.

ಶಟರ್ ಹಾಕಿ ನಿರ್ಮಿಸಿದ್ದ ಸುಮಾರು 30ಕ್ಕೂ ಅಧಿಕ ಅಂಗಡಿಗಳನ್ನು ಜೆಸಿಬಿ ಯಂತ್ರ ಬಳಸಿ ಮಹಾನಗರ ಪಾಲಿಕೆ ಅಧಿಕಾರಿ-ಸಿಬ್ಬಂದಿ ತೆರವು ಮಾಡಿದರು.
ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ್ ಮೆಕ್ಕಳಕಿ ನೇತೃತ್ವದಲ್ಲಿ ಪಾಲಿಕೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಪೊಲೀಸ್ ಭದ್ರತೆಯಲ್ಲಿ ಕಾರ್ಯಾಚರಣೆ ನಡೆಸಿದರು.

Related