ಅಕ್ರಮ ಗಣಿಗಾರಿಕೆ ಅಡ್ಡೆ ಮೇಲೆ ದಿಢೀರ್ ದಾಳಿ

ಅಕ್ರಮ ಗಣಿಗಾರಿಕೆ ಅಡ್ಡೆ ಮೇಲೆ ದಿಢೀರ್ ದಾಳಿ

ಮಂಡ್ಯ: ಅಕ್ರಮ ಗಣಿಗಾರಿಕೆ ನಡೆಸುತ್ತಿದ್ದ ಅಡ್ಡೆ ಮೇಲೆ ಗಣಿ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದರು.

ಗಣಿ ಮತ್ತು ವಿಜ್ಞಾನ ಇಲಾಖೆಯ ಅಧಿಕಾರಿ ಪುಲ್ಪ ನೇತೃತ್ವದಲ್ಲಿ ದಿಢೀರ್ ದಾಳಿ ನಡೆಸಿ ಕ್ರಷರ್‍ನಲ್ಲಿದ್ದ ವಾಹನಗಳು, ಉಪಕರಣಗಳು ಸೇರಿದಂತೆ ಸ್ಫೋಟಕಗಳನ್ನು ಅಧಿಕಾರಿಗಳು ಜಪ್ತಿ ಮಾಡಿದರು.

ಪಾಂಡವಪುರ ತಾಲ್ಲೂಕಿನ ಬೇಬಿಬೆಟ್ಟ ಮತ್ತು ಶ್ರೀರಂಗಪಟ್ಟಣ ತಾಲ್ಲೂಕಿನ ಟಿ.ಎಂ ಹೊಸೂರಿನ ಸುತ್ತಮುತ್ತಲ ಕಲ್ಲು ಕ್ವಾರೆಗಳ ಮೇಲೆ ಕಾರ್ಯಚರಣೆ ನಡೆಸಿ ಮಾಲೀಕರಿಗೆ ನೋಟಿಸ್ ನೀಡಿದರು.

Related