ನಿರ್ದಾಕ್ಷಿಣ್ಯ ಕ್ರಮ : ಸಚಿವ ಬೊಮ್ಮಾಯಿ

ನಿರ್ದಾಕ್ಷಿಣ್ಯ ಕ್ರಮ : ಸಚಿವ ಬೊಮ್ಮಾಯಿ

ಬೆಂಗಳೂರು, ಏ.20 : ಪಾದರಾಯನಪುರದಲ್ಲಿ ನಡೆದ ಘಟನೆಯ ಹಿಂದೆ ಎಷ್ಟೇ ದೊಡ್ಡವರಿದ್ದರೂ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಗಲಭೆ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಪಾದರಾಯನಪುರದಲ್ಲಿ ಹೆಚ್ಚು ಬಂದೋಬಸ್ತ್ ಮಾಡಿದ್ದೇವೆ. ಎಲ್ಲಾ ಸ್ಥಳಗಳಲ್ಲಿ ಸೂಕ್ತ ಬಂದೋಬಸ್ತ್ ಮಾಡಿದ್ದೇವೆ ಎಂದು ಹೇಳಿದರು.ಒಂದು ವಾರ ಸಹಕಾರ ಕೊಟ್ಟ ಜನರನ್ನು ದಾರಿ ತಪ್ಪಿಸಲು ದೊಂಬಿ-ಗಲಾಟೆ ಮಾಡಿಸಲು ಕೆಲವರು ಪ್ರಚೋದಿಸಿರುವ ಸಾಧ್ಯತೆ ಇದೆ. ಅವರು ಎಂತಹ ಗಣ್ಯ ವ್ಯಕ್ತಿಗಳೇ ಆಗಿದ್ದರೂ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

 

Related