ಬೆಳಗಾವಿ: ಕಾಂಗ್ರೆಸ್ ಗ್ಯಾರಂಟಿಗಳಲ್ಲಿ ಒಂದಾದ ಯುವನಿಧಿ ಯೋಜನೆಗೆ ಇದೇ ಡಿಸೆಂಬರ್ ಅಂತ್ಯದೊಳಗೆ ಜಾರಿಗೊಳಿಸುವುದಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹೇಳಿದ್ದಾರೆ.
ಬೆಳಗಾವಿಯಲ್ಲಿ ಸುವರ್ಣ ಸೌಧದಲ್ಲಿ ಮಾತನಾಡಿದವರು, ನಾವು ಕೊಟ್ಟ ಮಾತಿನಂತೆ ಡಿಸೆಂಬರ್ ತಿಂಗಳ ಅಂತ್ಯದಲ್ಲಿ ಯುವನಿಧಿ ಯೋಜನೆ ಜಾರಿ ಪ್ರಕ್ರಿಯೆ ಆರಂಭಿಸುತ್ತಿದ್ದೇವೆ ಎಂದು ತಿಳಿಸಿದರು.
ಈ ಯೋಜನೆ ಜಾರಿಗೆ ತಾಂತ್ರಿಕ ವಿಚಾರವಾಗಿ ಚರ್ಚೆ ಮಾಡಿದ್ದು, ಅನುಷ್ಠಾನದ ಜವಾಬ್ದಾರಿಯನ್ನು ಕೌಶ್ಯಲ್ಯಾಭಿವೃದ್ಧಿ ಸಚಿವರಿಗೆ ನೀಡಿದ್ದೇವೆ. ಜನವರಿಯಲ್ಲಿ ಈ ಯೋಜನೆಯ ಉದ್ಘಾಟನೆ ಕಾರ್ಯಕ್ರಮ ನಡೆಯಲಿದ್ದು, ಅಧಿಕೃತ ದಿನಾಂಕವನ್ನು ಸಚಿವರು ಪ್ರಕಟಿಸಲಿದ್ದಾರೆ.