ಇಂದು ಮಹತ್ವದ ಸಚಿವ ಸಂಪುಟ ಸಭೆ: ಎಲ್ಲರ ಚಿತ್ತ 5 ಗ್ಯಾರಂಟಿ ಅತ್ತ

ಇಂದು ಮಹತ್ವದ ಸಚಿವ ಸಂಪುಟ ಸಭೆ: ಎಲ್ಲರ ಚಿತ್ತ 5 ಗ್ಯಾರಂಟಿ ಅತ್ತ

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು ಕಾಂಗ್ರೆಸ್ ಸರ್ಕಾರದ ಮಹತ್ವದ ಸಂಪುಟ ಸಭೆ ನಡೆಯುತ್ತಿದ್ದು, ರಾಜ್ಯದ ಎಲ್ಲಾ ಜನರು ಬಹಳ ಕಾತುರದಿಂದ ಕಾಯುತ್ತಿದ್ದಾರೆ.

ಕಾಂಗ್ರೆಸ್ ಪಕ್ಷವು ಚುನಾವಣೆಯ ಮೊದಲು 5 ಗ್ಯಾರಂಟಿಗಳನ್ನು ಘೋಷಿಸಿದ್ದು ಆ ಗ್ಯಾರೆಂಟಿಗೆ ಇಂದು ಮಹತ್ವದ ದಿನವಾಗಬಹುದೆಂದು ರಾಜ್ಯದ ಎಲ್ಲಾ ಜನರು ಇಂದು ನಡೆಯುತ್ತಿರುವ ಸಂಪುಟ ಸಭೆಯತ್ತ  ಚಿತ್ತ ಹಾಯಿಸಿದ್ದಾರೆ.

ಹೌದು, ರಾಜ್ಯಾದ್ಯಂತ ಜನರು ಕಾತುರದಿಂದ ಕಾಯುತ್ತಿರುವ 5 ಗ್ಯಾರಂಟಿ ಯೋಜನೆಗಳ ಜಾರಿ ಬಗ್ಗೆ ಇಂದು ಶುಕ್ರವಾರ ಮಹತ್ವದ ಸಚಿವ ಸಂಪುಟ ನಡೆಯಲಿದ್ದು, ಉಚಿತ ಪ್ರಯಾಣ ಸೇರಿದಂತೆ 5 ಯೋಜನೆಗಳ ಅಧಿಕೃತ ಆರಂಭ ಕುರಿತು ಘೋಷಣೆ ಹೊರಬೀಳುವ ನಿರೀಕ್ಷೆಗಳಿವೆ.

ಈ ನಡುವಲ್ಲೇ ಉಚಿತ ಬಸ್ ಪ್ರಯಾಣ ಕುರಿತು ಸರ್ಕಾರದ ಘೋಷಣೆಗಾಗಿ ಕಾದು ಕುಳಿತಿರುವ ರಾಜ್ಯದ ಮಹಿಳೆಯರು, ಮಾಸಿಕ ಬಸ್ ಪಾಸ್ ಗಳ ಖರೀದಿಯಿಂದ ಹಿಂದೆ ಸರಿದು, ಟಿಕೆಟ್ ಗಳನ್ನು ಖರೀದಿ ಮಾಡುತ್ತಿದ್ದಾರೆಂದು ತಿಳಿದುಬಂದಿದೆ.

ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಯನ್ನು ಕಾಂಗ್ರೆಸ್ ಸರ್ಕಾರ ಜಾರಿಗೆ ತರುವ ವಿಶ್ವಾಸವಿದ್ದು, ಘೋಷಣೆಗಾಗಿ ಕಾಯುತ್ತಿದ್ದೇವೆಂದು ಮಹಿಳಾ ಮಣಿಗಳು ಹೇಳುತ್ತಿದ್ದಾರೆ.

ಬಿಎಂಟಿಸಿಗಳ ಸಾಮಾನ್ಯ ಬಸ್’ಗೆಳಿಗೆ ಪ್ರತೀ ತಿಂಗಳು 1,050 ರುಪಾಯಿ ವೆಚ್ಚವಾಗುತ್ತದೆ. ಶುಕ್ರವಾರ ಸರ್ಕಾರ ಸಂಪುಟ ಸಭೆ ನಡೆಸುತ್ತಿದ್ದು, ಯೋಜನೆ ಘೋಷಣೆಯಾಗುವ, ಜಾರಿಯಾಗುವ ನಿರೀಕ್ಷೆಯಿದೆ. ಯೋಜನೆ ಘೋಷಣೆಯಾಗಿದ್ದೇ ಆದರೆ, ಮಾಸಿಕ ಪಾಸ್ ವ್ಯಕ್ತವಾಗುತ್ತದೆ. ಹೀಗಾಗಿ ಖರೀದಿ ಮಾಡುತ್ತಿಲ್ಲ ಎಂದು ಹೇಳಿದ್ದಾರೆ.

 

Related