ಬಳ್ಳಾರಿಯಲ್ಲಿ ಇಬ್ಬರು ಬಲಿ

ಬಳ್ಳಾರಿಯಲ್ಲಿ ಇಬ್ಬರು ಬಲಿ

ಬೆಂಗಳೂರು, ಫೆ. 13 : ಬಳ್ಳಾರಿಯ ಹೊಸಪೇಟೆ ಬಳಿ ಮೂರು ದಿನಗಳ ಹಿಂದೆ ಕಾರೊಂದು ಗುದ್ದಿದ ಪರಿಣಾಮ ಇಬ್ಬರು ಮೃತಪಟ್ಟಿದ್ದು, ಕಾರನ್ನು ಬೆಂಗಳೂರಿನ ಪ್ರಭಾವಿ ಸಚಿವ ಆರ್. ಅಶೋಕ್ ಮಗ ಶರತ್ ಚಲಾಯಿಸುತ್ತಿದ್ದ ಎನ್ನುವ ಗಂಭೀರ ಆರೋಪವೊಂದು ಕೇಳಿ ಬಂದಿದೆ.
KA-05 MW-0357 ಕಾರಿನ ನಂಬರ್ ಮರ್ಸಿಡಿಸ್ ಬೆಂಜ್ ಕಾರ್ ಇದಾಗಿದೆ. ಹಂಪಿ ಸೇರಿದಂತೆ ಸುತ್ತಲಿನ ಪ್ರದೇಶದಲ್ಲಿ ಮೋಜು ಮಸ್ತಿ ಮಾಡಿಕೊಂಡು ಸೋಮವಾರ ಬೆಂಗಳೂರಿನ ಕಡೆಗೆ ಐದು ಜನರಿದ್ದ ಬೆಂಜ್ ಕಾರು ಹೊಸಪೇಟೆಯ ಹೊರವಲಯದಲ್ಲಿ ಇರುವ ಮರಿಯಮ್ಮನಹಳ್ಳಿ ಮಾರ್ಗವಾಗಿ ಪಯಣಿಸುತ್ತಿತ್ತು. ಈ ವೇಳೆ ಅಪಘಾತ ಸಂಭವಿಸಿದೆ.

Related