ರಾಸಲೀಲೆ ಪ್ರಕರಣದಲ್ಲಿ : ಹೆಚ್‌ಡಿಕೆ ಹೊಸ ಬಾಂಬ್

ರಾಸಲೀಲೆ ಪ್ರಕರಣದಲ್ಲಿ : ಹೆಚ್‌ಡಿಕೆ ಹೊಸ ಬಾಂಬ್

ಮೈಸೂರು : ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣದಲ್ಲಿ 5 ಕೋಟಿ ರೂ. ಡೀಲ್ ನಡೆದಿದೆ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿ, ಹೆಚ್.ಡಿ ಕುಮಾರಸ್ವಾಮಿ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ದೊಡ್ಡ ದೊಡ್ಡವರ ಕೈವಾಡವಿದೆ. ಕಳೆದ ಮೂರು ತಿಂಗಳಿಂದ ಈ ಡೀಲ್ ನಡೆದಿದೆ. ಪ್ರಕರಣದ ತನಿಖೆ ಮಾಡಿಸುವುದು ಸರ್ಕಾರದ ಜವಾಬ್ದಾರಿ ಎಂದು ಹೇಳಿದರು.

ರಮೇಶ್ ಜಾರಕಿಹೊಳಿ ಮಂತ್ರಿ ಸ್ಥಾನದಿಂದ ಕೆಳಗಿಳಿಸುವ ಉದ್ದೇಶದಿಂದ ಸಿಡಿ ಬ್ಲಾಕ್ ಮೇಲ್ ಮಾಡಲಾಗಿದೆ. ಇದೀಗ ರಮೇಶ್ ಜಾರಕಿಹೊಳಿ ಅವರನ್ನು ಮಂತ್ರಿ ಸ್ಥಾನದಿಂದ ಕೆಳಗಿಳಿಸುವಲ್ಲಿ ಸಫಲರಾಗಿದ್ದಾರೆ.

ಈ ಪ್ರಕರಣವನ್ನು ನೋಡಿ ಖುಷಿ ಪಡುವವನಲ್ಲ. ನಾನು ಒಂದು ಕಲ್ಲು ಹೊಡೆಯಬೇಕು ಎಂದು ಹೊಡೆಯಲ್ಲ. ನನಗೆ ತಿಳಿದುಬಂದಿರುವ ಮೂಲಗಳ ಮಾಹಿತಿ ಪ್ರಕಾರ ಸಿಡಿ ಪ್ರಕರಣದಲ್ಲಿ 5 ಕೋಟಿ ರೂ. ಡೀಲ್ ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

Related