ಬಸ್ಸಿನಲ್ಲಿ ದಿಢೀರ್ ಬೆಂಕಿ

ಬಸ್ಸಿನಲ್ಲಿ ದಿಢೀರ್ ಬೆಂಕಿ

ತುಮಕೂರು, ಫೆ. 5 : ನಗರದ ಶಿವಕುಮಾರ್ ಸ್ವಾಮೀಜಿ ಸರ್ಕಲ್ ಬಳಿ ತುಮಕೂರು ನಗರ ಸಾರಿಗೆ ಬಸ್ಸೊಂದರಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಪ್ರಾಣಪಾಯ ಸಂಭವಿಸಿಲ್ಲ.ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡಿದನ್ನು ಅರಿತ ಚಾಲಕ ತಕ್ಷಣವೇ ಪ್ರಯಾಣಿಕರನ್ನು ಕೆಳಗೆ ಇಳಿಸಿ ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ್ದಾರೆ. ಅಗ್ನಿಶಾಮಕ ದಳ ಸ್ಥಳಕ್ಕ ಧಾವಿಸಿ ಬೆಂಕಿ ನಂದಿಸಿದ್ದಾರೆ. ಚಾಲಕನ ಸಮಯಪ್ರಜ್ಞೆಯಿಂದ ಯಾವುದೇ ತೊಂದರೆ ಸಂಭವಿಸಿಲ್ಲ.ಶಾರ್ಟ್ ಸರ್ಕ್ಯೂಟ್ನಿಂದ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ. ಬಸ್ಸಿನಲ್ಲಿ 30ಕ್ಕೂ ಹೆಚ್ಚು ಪ್ರಯಾಣಿಕರು ಇದ್ದರು. ಮೊದಲು ಬಸ್ಸಿನಲ್ಲಿ ಹೋಗೆ ಕಾಣಿಸಿಕೊಂಡಿತ್ತು. ಬಳಿಕ ಏಕಾಏಕಿ ಬೆಂಕಿ ಹೊತ್ತಿಕೊಂಡಿತ್ತು.ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.

Related