ಇಸ್ಲಾಮಾಬಾದ್, ಫೆ. 18 : ಪದೇ ಪದೇ ಕ್ಯಾತೆ ತೆಗೆಯುವ ನರಿ ಬುದ್ಧಿಯ ಪಾಕಿಸ್ತಾನ ಇದೀಗ ಮತ್ತೆ ವಿಶ್ವಸಂಸ್ಥೆಯಲ್ಲಿ ಕ್ಯಾತೆ ತೆಗೆದಿದೆ. ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವ ವಿಷಯದಲ್ಲಿ ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ತೀವ್ರ ಪೇಚಿಗೆ ಸಿಲುಕಿರುವ ಪಾಕಿಸ್ತಾನ ಮತ್ತೆ ವಿಶ್ವಸಂಸ್ಥೆಯಲ್ಲಿ ಕಾಶ್ಮೀರ ವಿಚಾರವನ್ನು ಕೆದಕಿ ಹೊಸ ಕ್ಯಾತೆ ತೆಗೆದಿದೆ.ಕಣಿವೆ ರಾಜ್ಯದ ಮಾನವ ಹಕ್ಕುಗಳ ಪರಿಸ್ಥಿತಿ ಕುರಿತು ಗಮನ ಹರಿಸುವಂತೆ ಸಂಯುಕ್ತ ರಾಷ್ಟ್ರಗಳನ್ನು ಪ್ರತಿನಿಧಿಸುವ ವಿಶ್ವಸಂಸ್ಥೆಗೆ ಪಾಕಿಸ್ತಾನ ಆಗ್ರಹಿಸಿದೆ.
ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಆಂಟೋನಿಯೋ ಗುಟೆರಸ್ ಅವರೊಂದಗೆ ಸಭೆಯಲ್ಲಿ ಮಾತನಾಡಿರುವ ಪಾಕಿಸ್ತಾನ ಪ್ರಧಾನಮಂತ್ರಿ ಇಮ್ರಾನ್ ಖಾನ್ ಕಾಶ್ಮೀರ ವಿಚಾರವನ್ನು ಪ್ರಸ್ತಾಪಿಸಿದ್ದಾರೆ.