ಯರಗೋಳ್ ಅಣೆಕಟ್ಟು ಉದ್ಘಾಟನೆ

ಯರಗೋಳ್ ಅಣೆಕಟ್ಟು ಉದ್ಘಾಟನೆ

ಬಂಗಾರಪೇಟೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಜಿಲ್ಲಾಡಳಿತ ಹಾಗೂ ನಗರಾಭಿವೃದ್ಧಿ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಕೋಲಾರ, ಬಂಗಾರಪೇಟೆ ಮಾಲೂರು ಪಟ್ಟಣಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಯರಗೋಳ್ ಅಣೆಕಟ್ಟು ಉದ್ಘಾಟನೆ ನೆರವೇರಿಸಿದರು. ಇದೇ ಸಂದರ್ಭದಲ್ಲಿ ಕೋಲಾರ ಜಿಲ್ಲೆಯ ಒಟ್ಟು 2197.72 ಕೋಟಿ ರೂ.ಮೊತ್ತದ  ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಿದರು.

ಸಚಿವರಾದ ಡಾ: ಹೆಚ್.ಸಿ.ಮಹದೇವಪ್ಪ, ಕೆ.ಹೆಚ್.ಮುನಿಯಪ್ಪ, ಶಾಸಕರು ಹಾಗೂ ಕೋಲಾರ- ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ಅಧ್ಯಕ್ಷ ಹಾಗೂ ಶಾಸಕರಾದ  ಕೆ.ವೈ.ನಂಜೇಗೌಡ ಹಾಗೂ ಶಾಸಕ  ಎಸ್.ಎನ್.ನಾರಾಯಣಸ್ವಾಮಿ, ಸಂಸದ  ಉಪಸ್ಥಿತರಿದ್ದರು.

Related