ಕಾಂಗ್ರೆಸ್ ಪಕ್ಷದ ನೂತನ ಕಚೇರಿ ಉದ್ಘಾಟನೆ

ಕಾಂಗ್ರೆಸ್ ಪಕ್ಷದ ನೂತನ ಕಚೇರಿ ಉದ್ಘಾಟನೆ

ಬೆಂಗಳೂರು: ಇಂದು ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ನೂತನವಾಗಿ ಕಾಂಗ್ರೆಸ್ ಪಕ್ಷದ ಕಚೇರಿಯನ್ನು ಉದ್ಘಾಟನೆ ಮಾಡಲಾಯಿತು.

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಜಯನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ನೂತನ ಕಛೇರಿಯನ್ನು ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗರೆಡ್ಡಿ ರವರು ಮತ್ತು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾದ ಶ್ರೀಮತಿ ಸೌಮ್ಯರೆಡ್ಡಿರವರು ಮಾಜಿ ಮಹಾಪೌರರಾದ ಶ್ರೀಮತಿ ಪದ್ಮಾವತಿ, ಜಯನಗರ ವಿಧಾನಸಭಾ ಗ್ಯಾರಂಟಿ ಯೋಜನೆ ಆನುಷ್ಠಾನ ಸಮಿತಿ ಅಧ್ಯಕ್ಷರು, ಆಡಳಿತ ಪಕ್ಷದ ಮಾಜಿ ನಾಯಕ ಎನ್.ನಾಗರಾಜುರವರು ಕಛೇರಿಷನ್ನ ಉದ್ಘಾಟನೆ ಮಾಡಿದರು.

ಮಾಜಿ ಬಿಬಿಎಂಪಿ ಸದಸ್ಯರುಗಳು, ಬ್ಲಾಕ್ ಅಧ್ಯಕ್ಷರುಗಳು ಮತ್ತು ಎಲ್ಲಾ ಮುಂಚೂಣಿ ಘಟಕದ ಅಧ್ಯಕ್ಷರುಗಳು, ಪದಾಧಿಕಾರಿಗಳು ಮತ್ತು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರುಗಳು ಭಾಗವಹಿಸಿದ್ದರು.

Related