ಮೈಸೂರು ಒಡೆಯರಿಗೆ ರಾಮ ಮಂದಿರ ಉದ್ಘಾಟನೆ ಆಹ್ವಾನ

  • In State
  • January 19, 2024
  • 115 Views
ಮೈಸೂರು ಒಡೆಯರಿಗೆ ರಾಮ ಮಂದಿರ ಉದ್ಘಾಟನೆ ಆಹ್ವಾನ

ಮೈಸೂರು: ಇದೇ ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯನ್ನು ಇಡೀ ದೇಶದ ಜನ ತುದಿಗಾಲಿನಲ್ಲಿ ನಿಂತು ಕಾಯುತ್ತಿದ್ದಾರೆ.

ಇನ್ನು ಈ ರಾಮಮಂದಿರ ಉದ್ಘಾಟನೆಗೆ ದೇಶದಾದ್ಯಂತ ಗಣ್ಯಾತಿ ಗಣ್ಯರಿಗೆ ಅವನ ನೀಡಲಾಗಿದ್ದು ಕರ್ನಾಟಕ ರಾಜ್ಯದ ಮೈಸೂರು ರಾಜ್ಯ ಮನೆತನದ ಒಡೆಯರಾದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ಅಯೋಧ್ಯ ರಾಮ ಮಂದಿರ ಉದ್ಘಾಟನಾ ಆಹ್ವಾನ ಬಂದಿದ್ದು ಜನವರಿ 21ರಂದು ಮೈಸೂರಿನ ಒಡೆಯರು ರಾಮ ಮಂದಿರ ಉದ್ಘಾಟನೆಗೆ ಅಯೋಧ್ಯೆಗೆ ತೆರಳಲಿದ್ದಾರೆ.

ಈ ಬಗ್ಗೆ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಮಾತನಾಡಿ, ರಾಮಲಲ್ಲಾ ಪ್ರಾಣ ಪ್ರತಿಷ್ಠದಲ್ಲಿ ಭಾಗಿಯಾಗುತ್ತಿರುವುದು ನನ್ನ ಸೌಭಾಗ್ಯ. 500 ವರ್ಷಗಳ ನಂತರ ರಾಮಮಂದಿರ ನಿರ್ಮಾಣವಾಗಿದೆ. ಇದು ತುಂಬಾ ಖುಷಿಯ ವಿಚಾರ. ರಾಮಲಲ್ಲಾ ವಿಗ್ರಹ ಕೆತ್ತಿದ ಅರುಣ್ ಯೋಗಿರಾಜ್‌ ಅವರು ನಮ್ಮ ಮೈಸೂರಿನವರು. ಅವರಿಗೆ ಅಭಿನಂದನೆ ತಿಳಿಸುವೆ. ರಾಮಲಲ್ಲಾ ಮೂರ್ತಿ ಕೆತ್ತಿರುವುದು ಮೈಸೂರಿಗರಿಗೆ ಹೆಮ್ಮೆಯ ವಿಚಾರವಾಗಿದೆ ಎಂದರು.

 

 

Related