ಬೆಂಗಳೂರು: ಲೋಕಸಭಾ ಚುನಾವಣೆಯ ದಿನಾಂಕ ಘೋಷಣೆಯಾಗಿದ್ದರು ಕೂಡ ರಾಜ್ಯದಲ್ಲಿ ಮಧ್ಯ ಮಾರಾಟ ಮತ್ತು ಮಧ್ಯ ಕಳ್ಳ ಸಾಗಾಟತನ ನಡೆಯುತ್ತಲೇ ಇದೆ.
ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದ್ದರು ಕೂಡ ಅಬಕಾರಿ ಇಲಾಖೆ ಮತ್ತು ಮೈಸೂರು ಸೇಲ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್ ಮದ್ಯ ಮಾರಾಟ ಮತ್ತು ದಾಸ್ತಾನುಗಳ ಮೇಲೆ ಚುನಾವಣಾ ಆಯೋಗ ಹದ್ದಿನ ಕಣ್ಣಿಟ್ಟಿದೆ ಎಂದು ತಿಳಿದುಬಂದಿದೆ.
ಈ ಹಿನ್ನೆಲೆಯಲ್ಲಿ ಚುನಾವಣೆ ಮುಗಿಯುವವರೆಗೆ ಪ್ರತಿ ವ್ಯಕ್ತಿಯ ಗರಿಷ್ಠ ಮಾರಾಟಕ್ಕೆ ಮಿತಿ ಹಾಕಲು ಅಬಕಾರಿ ಇಲಾಖೆ ಕೂಡ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ.
ಮುಖ್ಯ ಚುನಾವಣಾ ಅಧಿಕಾರಿ ಕಚೇರಿಯ ಅಂಕಿಅಂಶಗಳ ಪ್ರಕಾರ, ಚುನಾವಣಾ ನೀತಿ ಸಂಹಿತೆ ಜಾರಿ ಬಳಿಕ ಕೇವಲ 10 ದಿನಗಳಲ್ಲಿ ಮದ್ಯ ವಶಪಡಿಸಿಕೊಳ್ಳುವಿಕೆಯು ಶೇ.31.79ರಷ್ಟು ಹೆಚ್ಚಳವಾಗಿದೆ ಎಂದು ತಿಳಿದುಬಂದಿದೆ.