ಸಿಲಿಕಾನ್ ಸಿಟಿಯಲ್ಲಿ ಮತ್ತೆ ಮರುಜೀವ ಪಡೆಯುತ್ತಿರುವ ಇಂದಿರಾ ಕ್ಯಾಂಟೀನ್!!

  • In State
  • May 20, 2023
  • 168 Views
ಸಿಲಿಕಾನ್ ಸಿಟಿಯಲ್ಲಿ ಮತ್ತೆ ಮರುಜೀವ ಪಡೆಯುತ್ತಿರುವ ಇಂದಿರಾ ಕ್ಯಾಂಟೀನ್!!

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಕಳೆದ ಬಾರಿ ಬಿಜೆಪಿ ಸರ್ಕಾರ ಇದ್ದಾಗ ಬಿಜೆಪಿ ಸರ್ಕಾರದವರು ಇಂದಿರಾ ಕ್ಯಾಂಟೀನ್ ಬಳಕೆದಾರರು ಸರಿಯಾಗಿ ಕರೆಂಟ್ ಬಿಲ್ಲು ಮತ್ತು ನೀರಿನ ಬಿಲ್ಲನ್ನು ಪಾವತಿಸುತ್ತಿಲ್ಲ ಹಾಗೂ ಇಂದಿರಾ ಕ್ಯಾಂಟೀನ್ ನಲ್ಲಿ ಅಡುಗೆಯು ರುಚಿಕರ ಹಾಗೂ ಶುದ್ಧಕರವಾಗಿರ ಆಗಿರಲಿಲ್ಲವೆಂದು ಬೆಂಗಳೂರು ನಗರದಲ್ಲಿ ಹಲವಾರು ಕಡೆ ಇಂದಿರಾ ಕ್ಯಾಂಟೀನ್ ಅನ್ನು ಮುಚ್ಚಲಾಗಿತ್ತು.

ಹೌದು, ಆರ್ಥಿಕತೆ ಕೊರತೆ ಎದುರಿಸುತ್ತಿರುವ ಸಿಲಿಕಾನ್‌ ಸಿಟಿಯ ಇಂದಿರಾ ಕ್ಯಾಂಟೀನ್‌ಗಳಿಗೆ ಆಗಾಗ್ಗೆ ನೀರಿನ ಸಮಸ್ಯೆ ಎದುರಾಗಿ ಬಿಲ್‌ ಪಾವತಿ ಆಗಿಲ್ಲ ಎಂಬ ಕಾರಣಕ್ಕೆ ಜಲಮಂಡಳಿ ನೀರಿನ ಪೂರೈಕೆಯನ್ನು ಸ್ಥಗಿತಗೊಳಿಸಿತ್ತು. ಜತೆಗೆ ರುಚಿ ಮತ್ತು ಶುಚಿತ್ವ ಆಹಾರ ದೊರೆಯುತ್ತಿಲ್ಲ ಎಂಬ ಕಾರಣದಿಂದಾಗಿ ಗ್ರಾಹಕರ ಸಂಖ್ಯೆ ಕೂಡ ಕಡಿಮೆಯಾಗಿತ್ತು. ಆ ಹಿನ್ನೆಲೆಯಲ್ಲಿ ಎಲ್ಲಿ ಇಂದಿರಾ ಕ್ಯಾಂಟೀನ್‌ಗಳು ಮುಚ್ಚಿ ಹೋಗುತ್ತವೆಯೋ ಎಂಬ ಆಂತಕ ನಗರದಲ್ಲಿ ನೆಲೆಸಿದ್ದ ಕೂಲಿ ಕಾರ್ಮಿಕರು, ವಲಸಿಗರು ಮತ್ತು ಆಟೋ ಚಾಲಕರಲ್ಲಿ ಮನೆ ಮಾಡಿತ್ತು.

ಆದರೀಗ ಸಿದ್ದರಾಮಯ್ಯ ಅವರು 2ನೇ ಬಾರಿಗೆ ಮುಖ್ಯಮಂತ್ರಿ ಆಗಿ ಘೋಷಣೆ ಆಗುತ್ತಿದ್ದಂತೆ ಇತ್ತ ಮೈ ಕೊಡವಿವೆದ್ದಿರುವ ಬಿಬಿಎಂಪಿ ಕೂಡ ಅಗತ್ಯವಿರುವ ಕೊಳಗೇರಿ ಪ್ರದೇಶಗಳಲ್ಲಿ ಇಂದಿರಾ ಕ್ಯಾಂಟಿನ್‌ಗಳನ್ನು ಶಿಫ್ಟ್ ಮಾಡುವ ಆಲೋಚನೆಯನ್ನು ಮಾಡಿದೆ. ಹೆಚ್ಚು ಜನನಿಬಿಡ ಪ್ರದೇಶಗಳಲ್ಲಿ ಮತ್ತಷ್ಟು ಮೊಬೈಲ್‌ ಕ್ಯಾಂಟೀನ್‌ಗಳನ್ನು ಆರಂಭಿಸುವ ಚಿಂತನೆ ನಡೆಸಿದ್ದು, ಒಟ್ಟಾರೆ ಇಂದಿರಾ ಕ್ಯಾಂಟೀನ್‌ಗೆ ಹೊಸ ರೂಪ ನೀಡುವ ನಿರೀಕ್ಷೆಯಲಿದ್ದಾರೆ. ಸರ್ಕಾರದ ಅನುಮತಿ ಪಡೆದು ಮುಂದುವರಿಯುವುದಾಗಿ ಅಧಿಕಾರಿಗಳು ಹೇಳುತ್ತಾರೆ.

 

Related