ತೆರವಾದ ಸಚಿವ ಸ್ಥಾನಕ್ಕೆ ತೀವ್ರಗೊಂಡ ಲಾಬಿ

ತೆರವಾದ ಸಚಿವ ಸ್ಥಾನಕ್ಕೆ ತೀವ್ರಗೊಂಡ ಲಾಬಿ

ಬೆಂಗಳೂರು: ರಾಸಲೀಲೆ ಪ್ರಕರಣ ಬಯಲಾದ ಹಿನ್ನೆಲೆ ರಮೇಶ್ ಜಾರಕಿಹೊಳಿ ರಾಜೀನಾಮೆಯಿಂದ ತೆರವಾಗಿರುವ ಸಚಿವ ಸ್ಥಾನವನ್ನು ತಮ್ಮ ಕುಟುಂಬದವರಿಗೆ ಅಥವಾ ಆಪ್ತರಿಗೆ ನೀಡಬೇಕು ಎನ್ನುವ ಪ್ರಬಲ ಒತ್ತಾಯ ಜಾರಕಿಹೊಳಿ ಕಡೆಯವರಿರಿಂದ ಬಂದಿದೆ ಎನ್ನಲಾಗುತ್ತಿದೆ.

ಈಗಿರುವ ಪರಿಸ್ಥಿತಿಯಲ್ಲಿ ಜಾರಕಿಹೊಳಿ ಕುಟುಂಬಸ್ಥರು ಅಂದರೆ ಬಾಲಚಂದ್ರ ಜಾರಕಿಹೊಳಿ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ಸಾಧ್ಯತೆ ಕಡಿಮೆ. ಈ ಹಿನ್ನೆಲೆ ರಮೇಶ್ ಆಪ್ತರಾದ ಮಹೇಶ್ ಕುಮಟಳ್ಳಿ ಅವರ ಹೆಸರು ಚಾಲ್ತಿಗೆ ಬಂದಿದೆ. ಮಾಜಿ ಸಚಿವರ ಬಲಗೈ ಬಂಟ ಎಂದೇ ಗುರುತಿಸಿಕೊಂಡಿರುವ ಮಹೇಶ್ ಕುಮಟಳ್ಳಿ ಹೀಗಾದರೂ ಸಚಿವ ಸ್ಥಾನ ಪಡೆಯುವ ಸಾಧ್ಯತೆ ಇದೆ.

ಬೆಳಗಾವಿ ಜಿಲ್ಲೆಯ ಉಸ್ತುವಾರಿಯ ಸ್ಥಾನಕ್ಕೂ ಪೈಪೋಟಿ ಆರಂಭವಾಗಿದ್ದು, ಡಿಸಿಎಂ ಲಕ್ಷ್ಮಣ ಸವದಿ ಹಾಗೂ ಉಮೇಶ್ ಕತ್ತಿ ಇಬ್ಬರೂ ಟವೆಲ್ ಹಾಸಿದ್ದಾರೆ ಎಂಬ ಮಾತೂ ಕೇಳಿಬರುತ್ತಿದೆ.

Related