ಶಹಾಪುರ: 2024-25ನೇ ಸಾಲಿನ ಹಿಂಗಾರು ಹಂಗಾಮಿಗಾಗಿ ನೀರಾವರಿ ಸಲಹಾ ಸಮಿತಿ(ಐಸಿಸಿ) ಸಭೆಯನ್ನು ನ.16ರಂದು ಬೆಳಿಗ್ಗೆ 11 ಗಂಟೆಗೆ ಆಲಮಟ್ಟಿಯಲ್ಲಿನ ಕೃಷ್ಣಾ ಭಾಗ್ಯ ಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕರ ಸಭಾಂಗಣದಲ್ಲಿ ನೀರಾವರಿ ಸಲಹಾ ಸಮಿತಿ ಸಭೆಯ ಅಧ್ಯಕ್ಷರಾದ ಆರ್.ಬಿ.ತಿಮ್ಮಾಪುರ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ವಿದ್ಯೆ ಯಾರೊಬ್ಬರ ಸ್ವತ್ತಲ್ಲ: ಸಿಎಂ ಸಿದ್ದರಾಮಯ್ಯ
ಈ ಕುರಿತು ಮಾಹಿತಿ ನೀಡಿದ ಅವರು, ಮಂಗಾರು ಹಂಗಾಮಿನ ಬೆಳೆಗೆ ಕಾಲುವೆ ನೀರು ಹರಿಸುವುದು ಇಂದು (ನ.13) ಮುಕ್ತಾಯಗೊಳ್ಳದೆ. ಅದರಂತೆ ಹಿಂಗಾರು ಹಂಗಾಮಿನ ಬೆಳೆಗೆ ಎಷ್ಟು ದಿನಗಳ ಕಾಲ ನೀರು ಹರಿಸುವ ಪ್ರಮುಖ ನಿರ್ಧಾರವನ್ನು ಸಭೆಯಲ್ಲಿ ಚರ್ಚಿಸಿ ರೈತರಿಗೆ ಅನುಕೂಲವಾಗುವ ರೀತಿಯಲ್ಲಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅವರು ತಿಳಿಸಿದರು.