ಬೆಂಗಳೂರು : ಮಹಿಳೆಯರ ಮೇಲಿನ ದೌರ್ಜನ್ಯ ಮಾಡುವುದು ಅಪರಾಧ. ಒಬ್ಬ ಶಾಸಕನಾಗಿ ಸಿದ್ದು ಸವದಿ ಮಹಿಳೆಯರ ಮೇಲೆ ದೌರ್ಜನ್ಯ ಮಾಡಿದ್ದು ಸರಿಯೇ? ಇದೇನಾ ಬಿಜೆಪಿಯವರ ಸಂಸ್ಕೃತಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು ಮಹಾಲಿಂಗಪುರ ಪುರಸಭೆ ಚುನಾವಣೆ ಸಂದರ್ಭ ಶಾಸಕ ಸಿದ್ದು ಸವದಿ ವರ್ತನೆಯನ್ನು ಖಂಡಿಸಿದರು. ನೀವೆಲ್ಲರೂ ವಿಡಿಯೋ ಕ್ಲಿಪ್ಪಿಂಗ್ಸ್ ನೋಡಿದ್ದೀರಿ. ಹೆಣ್ಣುಮಕ್ಕಳ ಮೇಲೆ ದೌರ್ಜನ್ಯ ಮಾಡಿದ್ದಾರೆ. ಹೆದರಿಸಿ ಬೆದರಿಸಿ ಮತ ಹಾಕಿಸಿಕೊಳ್ಳುತ್ತಾರೆ.
ನಾವು ಸುಸಂಸ್ಕೃತರು ಎಂದು ಬಿಜೆಪಿಯವರು ಹೇಳುತ್ತಾರೆ. ಇದೇನಾ ಬಿಜೆಪಿಯವರ ಸಂಸ್ಕೃತಿ? ನಾವು ಇದನ್ನ ತೀರ್ವವಾಗಿ ಖಂಡಿಸುತ್ತೇನೆ. ನಮ್ಮ ಪಕ್ಷ ಇದರ ವಿರುದ್ಧ ಉಗ್ರ ಹೋರಾಟ ಮಾಡಲಿದೆ ಎಂದರು.
ಉಪಚುನಾವಣೆ ಸೋಲಿನ ವಿಚಾರದ ಬಗ್ಗೆ ಮಾತನಾಡಿದ ಅವರು, ಹಿಂದೆ ನಾವು ಉಪಚುನಾವಣೆ ಗೆದ್ದಿದ್ದೇವಲ್ಲ, ಆಗ ಬಿಜೆಪಿ ಮುಳುಗಿ ಹೋಗಿತ್ತಾ? ಯಾವಾಗಲು ಅಧಿಕಾರ ಇದ್ದ ಪಕ್ಷ ಗೆಲ್ಲುತ್ತದೆ ಎಂದರು.