9 ಲಕ್ಷ ಮಂದಿಗೆ ಉದ್ಯೋಗ : ಈಶ್ವರಪ್ಪ

9 ಲಕ್ಷ ಮಂದಿಗೆ ಉದ್ಯೋಗ : ಈಶ್ವರಪ್ಪ

ಹುಬ್ಬಳ್ಳಿ : ಜಿಲ್ಲಾ ಪಂಚಾಯತ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ನರೇಗಾ ಯೋಜನೆಯಡಿ ರಾಜ್ಯದಲ್ಲಿ ಈವರೆಗೆ 9 ಲಕ್ಷಕ್ಕೂ ಅಕ ಮಂದಿಗೆ ಉದ್ಯೋಗ ಕಲ್ಪಿಸಲಾಗಿದೆ. ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.

ಬೇರೆ ಬೇರೆ ರಾಜ್ಯಗಳಿಂದ ನಮ್ಮ ರಾಜ್ಯಗಳಿಗೆ ಹಲವಾರು ಜನ ಆಗಮಿಸುವ ಅಪೇಕ್ಷೆ ಹೊಂದಿದ್ದಾರೆ. ರೋಗ ನಿಯಂತ್ರಣಕ್ಕೆ ಸರ್ಕಾರ ಅನೇಕ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುತ್ತಿದೆ. ರಾಜ್ಯಕ್ಕೆ ಆಗಮಿಸುವವರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸುವ ಮೂಲಕ ಕೊರೋನಾ ತಡೆಗಟ್ಟುವ ಕಾರ್ಯ ಮಾಡಲಾಗುತ್ತಿದೆ.

ಗ್ರಾಮೀಣ ಪ್ರದೇಶಗಳಲ್ಲಿ ಗ್ರಾಮಸ್ಥರು ಶಿಸ್ತಿನಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಗ್ರಾಮೀಣ ಪ್ರದೇಶದ ಜನರಿಂದ ಸರ್ಕಾರದ ನಿಯಮಗಳು ಸರಿಯಾಗಿ ಪಾಲನೆಯಾಗುತ್ತಿವೆ. ಗ್ರಾಮೀಣ ಪ್ರದೇಶದ ಜನರಿಂದ ನರೇಗಾ ಯೋಜನೆ ಯಶಸ್ವಿಯಾಗುತ್ತಿದೆ ಎಂದು ತಿಳಿಸಿದರು.

Related