ಕಲಬುರ್ಗಿ : ಗ್ರಾಮೀಣ ಭಾಗದಲ್ಲಿ ಹೆಚ್ಚಾಗುತ್ತಿದೆ. ಆದ್ದರಿಂದ ಲಾಕ್ಡೌನ್ ಇನ್ನಷ್ಟು ದಿನ ವಿಸ್ತರಿಸಿದರೆ ಒಳ್ಳೆಯದು ಎಂದು ಗಣಿ ಮತ್ತು ಭೂ ವಿಜ್ಞಾನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ನಿರಾಣಿ ತಿಳಿಸಿದರು.
ಈ ವೇಳೆ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಮುಖ್ಯಮಂತ್ರಿ ಅವರಿಗೆ ಕೂಡಾ ತಿಳಿಸಿದ್ದೇವೆ.
ರಾಜ್ಯದಲ್ಲಿ ಆಮ್ಲಜನಕ ಕೊರತೆ ನಿವಾರಿಸಲು ಗಣಿ ಇಲಾಖೆಯಿಂದ ಹತ್ತು ಟ್ಯಾಂಕರ್ ನೀಡುತ್ತಿದ್ದೇವೆ. ಹತ್ತು ದಿನದಲ್ಲಿ ಪ್ರತಿ ವಿಭಾಗಕ್ಕೆ ಎರಡೆರಡು ಆಮ್ಲಜನಕ ಟ್ಯಾಂಕರ್ ನೀಡಲಾಗುತ್ತದೆ.
ಮೂರನೇ ಅಲೆಗಾಗಿ ಬೇಕಾದ ಎಲ್ಲಾ ಕ್ರಮಗಳನ್ನು ಈಗಾಗಲೇ ಕೈಗೊಳ್ಳುತ್ತೇವೆ ಎಂದರು.
ಈ ವೇಳೆ ಸಂಸದ ಡಾ.ಉಮೇಶ ಜಾಧವ ಮಾತನಾಡಿ, ಕಪ್ಪು ಶಿಲೀಂಧ್ರ ಕಾಯಿಲೆ ಮಧುಮೇಹ ಇದ್ದವರಿಗೆ ಬರುತ್ತದೆ. ಅದಕ್ಕೂ ಮುಂಬೈನಿAದ ಔಷಧಿ ತರಿಸಿಕೊಡಲಾಗಿದೆ. ಯಾರೂ ಗಾಬರಿಯಾಗುವ ಅಗತ್ಯವಿಲ್ಲ ಎಂದು ಹೇಳಿದರು.