ಖಂಡ್ರೆ ಕುಟುಂಬಕ್ಕೆ ಐಟಿ ಶಾಕ್

ಖಂಡ್ರೆ ಕುಟುಂಬಕ್ಕೆ ಐಟಿ ಶಾಕ್

ಬೀದರ್:  ಕರ್ನಾಟಕ ರಾಜ್ಯದಲ್ಲಿ ಲೋಕಸಭಾ ಚುನಾವಣೆ ದಿನಗಡನೆ ಪ್ರಾರಂಭವಾಗಿದ್ದು ಬೀದರ್ ಜಿಲ್ಲಾ ಉಸ್ತುವಾರಿ ಸಚಿವರಾಗಿರುವಂತಹ ಈಶ್ವರ್ ಖಂಡ್ರೆ ಅವರ ಸಹೋದರ ಅಮರ್ ಖಂಡ್ರೆ ಅದ್ಯಕ್ಷರಾಗಿರುವ ಡಿಸಿಸಿ ಬ್ಯಾಂಕ್ ಹಾಗೂ ಮಹಾತ್ಮ ಗಾಂಧಿ ಸೌಹಾರ್ದ ಸಹಕಾರಿ ಸಂಘದ ಮೇಲೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಶುಕ್ರವಾರ ರಾತ್ರಿ ಸುಮಾರು ಎಂಟು ಗಂಟೆಯವರೆಗೆ ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ.

ಮೊದಲಿಗೆ ಬೀದ‌ರ್ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ (ಡಿಸಿಸಿ ಬ್ಯಾಂಕ್) ಮೇಲೆ ಬೆಳಗ್ಗೆ 10.30ರ ಸುಮಾರಿಗೆ ದಾಳಿ ನಡೆಸಿದ ವಿಜಯ ಪುರ, ಕಲಬುರಗಿ ಹಾಗೂ ರಾಯಚೂರಿನ ಐಟಿ ಅಧಿಕಾರಿಗಳ ತಂಡ ಪೊಲೀಸ್ ಬಂದೋಬಸ್ತ್ ನಲ್ಲಿ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿ ಮೊಬೈಲ್ ಸ್ವಿಚ್ ಆಫ್ ಮಾಡಿಸಿ ಬ್ಯಾಂಕ್ ವ್ಯವಹಾರಗಳ ತನಿಖೆಗೆ ಇಳಿದಿದ್ದಾರೆ. ಆ ಬಳಿಕ ರಾತ್ರಿ ವೇಳೆಗೆ ಮಹಾತ್ಮಾ ಗಾಂಧಿ ಕಚೇರಿ ಮೇಲೆ ರಾತ್ರಿ ವೇಳೆ ದಾಳಿ ನಡೆದಿದೆ.

Related