ಜ. 29ರಿಂದ ಜಿಎಎಫ್‌ಎಕ್ಸ್‌ ಸಮ್ಮೇಳನ: ಪ್ರಿಯಾಂಕ ಖರ್ಗೆ

ಜ. 29ರಿಂದ ಜಿಎಎಫ್‌ಎಕ್ಸ್‌ ಸಮ್ಮೇಳನ: ಪ್ರಿಯಾಂಕ ಖರ್ಗೆ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇದೆ 29ನೇ ತಾರೀಕಿನಂದು ಜಿಎಎಫ್‌ಎಕ್ಸ್‌ ಸಮ್ಮೇಳನ ನಡೆಯಲಿದ್ದು ಈ ಸಮ್ಮೇಳನವನ್ನು ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟನೆ ಮಾಡಲಿದ್ದಾರೆ ಎಂದು ಐಟಿ-ಬಿಟಿ ಇಲಾಖೆಯ ಸಚಿವರಾಗಿರುವಂತಹ ಪ್ರಿಯಾಂಕ ಖರ್ಗೆ ಅವರು ಹೇಳಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕರ್ನಾಟಕ ಸರ್ಕಾರ ಮತ್ತು ಅಬೈ ಸಂಯುಕ್ತಾಶ್ರಯದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಸಮ್ಮೇಳನದಲ್ಲಿ 10 ರಾಷ್ಟ್ರಗಳಿಂದ 32 ಅಂತಾರಾಷ್ಟ್ರೀಯ ಭಾಷಣಕಾರರು ಭಾಗಿಯಾಗುತ್ತಾರೆ. ನಗರದ ಖಾಸಗಿ ಹೋಟೆಲ್​ನಲ್ಲಿ ಸಮ್ಮೇಳನ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮ್ಮೇಳನಕ್ಕೆ ಚಾಲನೆ ನೀಡಲಿದ್ದಾರೆ ಎಂದರು.

 

 

 

Related