ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪವಾಗುತ್ತಿದ್ದಂತೆ ಜೆಡಿಎಸ್ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ಕುಮಾರಸ್ವಾಮಿ ಪಕ್ಷ ಸಂಘಟನೆಯಲ್ಲಿ ಸಕ್ರಿಯರಾಗಿದ್ದಾರೆ.
ಜೂನ್ ಹಾಗೂ ಜುಲೈನಲ್ಲಿ ರಾಜ್ಯ ಪ್ರವಾಸಕ್ಕೆ ನಿರ್ಧರಿಸಿರುವ ನಿಖಿಲ್ ಕುಮಾರಸ್ವಾಮಿ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಜೆಡಿಎಸ್ಯುವ ಘಟಕ ಬಲವರ್ಧನೆ ಮಾಡಲು ಸಿದ್ಧತೆ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಬೂತ್, ಬ್ಲಾಕ್ ಹಾಗೂ ಜಿಲ್ಲಾ ಮಟ್ಟದಲ್ಲಿ ನಿಷ್ಠಾವಂತ, ಉತ್ಸಾಹಿ ಯುವಕರಿಗೆ ಪಕ್ಷದಲ್ಲಿಅವಕಾಶ ನೀಡಿ ಪದಾಧಿಕಾರಿಗಳಾಗಿ ನೇಮಕ ಮಾಡಲು ಮುಂದಾಗಿದ್ದಾರೆ.
ಯುವ ಪಡೆ ರಚನೆಯ ಬಳಿಕ ರಾಜ್ಯಾದ್ಯಂತ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ಯುವಯಾತ್ರೆ ಆರಂಭವಾಗಲಿದ್ದು, ರಾಜ್ಯಾದ್ಯಂತ ಸಂಚರಿಸಿ ಯುವ ಮತದಾರರನ್ನು ಸೆಳೆಯಲು ಜೆಡಿಎಸ್ ಈಗಿನಿಂದಲೇ ತಯಾರಿ ಆರಂಭವಾಗಿದೆ.