ಯುವ ಮತದಾರರನ್ನು ಸೆಳೆಯಲು ಜೆಡಿಎಸ್ ಈಗಿನಿಂದಲೇ ತಯಾರಿ

ಯುವ ಮತದಾರರನ್ನು ಸೆಳೆಯಲು ಜೆಡಿಎಸ್ ಈಗಿನಿಂದಲೇ ತಯಾರಿ

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪವಾಗುತ್ತಿದ್ದಂತೆ  ಜೆಡಿಎಸ್ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ಕುಮಾರಸ್ವಾಮಿ ಪಕ್ಷ ಸಂಘಟನೆಯಲ್ಲಿ ಸಕ್ರಿಯರಾಗಿದ್ದಾರೆ.

ಜೂನ್ ಹಾಗೂ ಜುಲೈನಲ್ಲಿ ರಾಜ್ಯ ಪ್ರವಾಸಕ್ಕೆ ನಿರ್ಧರಿಸಿರುವ ನಿಖಿಲ್​ ಕುಮಾರಸ್ವಾಮಿ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಜೆಡಿಎಸ್ಯುವ ಘಟಕ ಬಲವರ್ಧನೆ ಮಾಡಲು ಸಿದ್ಧತೆ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ  ಬೂತ್, ಬ್ಲಾಕ್ ಹಾಗೂ ಜಿಲ್ಲಾ ಮಟ್ಟದಲ್ಲಿ ನಿಷ್ಠಾವಂತ, ಉತ್ಸಾಹಿ ಯುವಕರಿಗೆ ಪಕ್ಷದಲ್ಲಿಅವಕಾಶ ನೀಡಿ ಪದಾಧಿಕಾರಿಗಳಾಗಿ ನೇಮಕ ಮಾಡಲು ಮುಂದಾಗಿದ್ದಾರೆ.

ಯುವ ಪಡೆ ರಚನೆಯ ಬಳಿಕ ರಾಜ್ಯಾದ್ಯಂತ ನಿಖಿಲ್​ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್​ ಯುವಯಾತ್ರೆ ಆರಂಭವಾಗಲಿದ್ದು, ರಾಜ್ಯಾದ್ಯಂತ ಸಂಚರಿಸಿ ಯುವ ಮತದಾರರನ್ನು ಸೆಳೆಯಲು ಜೆಡಿಎಸ್​ ಈಗಿನಿಂದಲೇ ತಯಾರಿ ಆರಂಭವಾಗಿದೆ.

Related