ಕಾರ್ಮಿಕರಿಗೆ ಜಾಬ್‌ಕಾರ್ಡ್ ವಿತರಣೆ

ಕಾರ್ಮಿಕರಿಗೆ ಜಾಬ್‌ಕಾರ್ಡ್ ವಿತರಣೆ

ಮುದ್ದೇಬಿಹಾಳ : ಲಾಕ್‌ಡೌನ್‌ದಲ್ಲಿ ಸಂಕಷ್ಟಕ್ಕೀಡಾಗಿ ತಮ್ಮ ತಮ್ಮ ಗ್ರಾಮಗಳಿಗೆ ವಾಪಸ್ಸಾಗಿರುವ ಭೂರಹಿತ ಕೂಲಿಕಾರ್ಮಿಕರಿಗೆ ಉದ್ಯೋಗ ಖಾತ್ರಿ ಯೋಜನೆಯಡಿ ಜಾಬ್ ಕಾರ್ಡ್‍ಗಳನ್ನು ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ವಿತರಿಸಿದರು.

ತಾಲೂಕಿನ ಯರಝರಿ ಜಿ. ಪಂ. ವ್ಯಾಪ್ತಿಯಲ್ಲಿ ಬರುವ ಹಡಲಗೇರಿ ಗ್ರಾ.ಪಂ. ಅಡಿಯಲ್ಲಿ ಕಾರ್ಮಿಕರಿಗೆ ಜಾಬ್ ಕಾರ್ಡ ವಿತರಿಸಿ ಅವರು ಮಾತನಾಡಿ, ಉದ್ಯೋಗ ವಿಲ್ಲದೇ ಖಾಲಿ ಕೂತಿದ್ದೇವೆ ಎಂಬ ಭಾವನೆ ಭೂ ರಹಿತ ಕೂಲಿ ಕಾರ್ಮಿಕರಿಗೆ ಬರಬಾರದು ಎಂಬ ಉದ್ದೇಶದಿಂದ ಎಲ್ಲ ಗ್ರಾ.ಪಂಗಳ ವ್ಯಾಪ್ತಿಯಲ್ಲಿ ವಲಸೆ ಹೋಗಿದ್ದ ಭೂ ರಹಿತ ಕೂಲಿ ಕಾರ್ಮಿಕರಿಗೆ ಕೆಲಸ ಕೊಡುವ ಖಾತ್ರಿ ಕಾರ್ಯವನ್ನು ಮಾಡಲಾಗುತ್ತಿದೆ ಎಂದರು.

Related