ಸತೀಶ್ ರೆಡ್ಡಿ ನೇತೃತ್ವದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆ

ಸತೀಶ್ ರೆಡ್ಡಿ ನೇತೃತ್ವದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆ

ಕೇಂದ್ರ ಹಾಗೂ ರಾಜ್ಯ ಸರ್ಕರಗಳ ಅಭಿವೃದ್ದಿ ಕಾರ್ಯಗಳನ್ನು ಮೆಚ್ಚಿ ಬೊಮ್ಮನಹಳ್ಳಿ ನಗರಸಭಾ ಮಾಜಿ ಸದಸ್ಯರು ಕಾಂಗ್ರೆಸ್ ಮುಖಂಡರಾದ ಲತಾ ವೆಂಕಟೇಶ್ ಹಾಗೂ ಅವರ ಪತಿ ಕಾಂಗ್ರೆಸ್ ಮುಖಂಡ ವೆಂಕಟೇಶ್ ಮೂರ್ತಿ ರವರು ಜರಗನಹಳ್ಳಿ ವಾರ್ಡಿನ ನೂರಾರು ಕಾಂಗ್ರೆಸ್ ಕಾರ್ಯಕರ್ತರು ರಾಜೀನಾಮೆ ನೀಡಿ ಬೊಮ್ಮನಹಳ್ಳಿ ಶಾಸಕ ಎಂ. ಸತೀಶ್ ರೆಡ್ಡಿ ರವರ ನೇತೃತ್ವದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು.

ಈ ವೇಳೆ ಮಾಜಿ ಮಹಾಪೌರರಾದ ಎಸ್.ಕೆ.ನಟರಾಜ್, ಮಾಜಿ ಮಹಾನಗರ ಪಾಲಿಕೆ ಸದಸ್ಯರಾದ ಬಸವರಾಜ್, ಜಲ್ಲಿ ರಮೇಶ್ ಹಾಗೂ ಎ.ಟಿ. ಲೋಕೇಶ್ ಮತ್ತಿತರರು ಹಾಜರಿದ್ದರು.

Related