ಜಂಟಿ ಸ್ಥಳ ಪರಿಶೀಲನೆ

ಜಂಟಿ ಸ್ಥಳ ಪರಿಶೀಲನೆ

ಬೆಂಗಳೂರು: ಮಾನ್ಯ ತೋಟಗಾರಿಕೆ ಮತ್ತು ಯೋಜನೆ, ಕಾರ್ಯಕ್ರಮ ಸಂಯೋಜನೆ, ಸಾಂಖ್ಯಿಕ ಇಲಾಖೆ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಮುನಿರತ್ನ ಅವರು ವಸತಿ ಸಚಿವರಾದ ಶ್ರೀ ವಿ.ಸೋಮಣ್ಣ ಅವರೊಂದಿಗೆ ಗೋವಿಂದರಾಜನಗರ ಮತ್ತು ಆರ್.ಆರ್‌.ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಒಳಪಡುವ ಮೈಸೂರು ರಸ್ತೆಯ ರಾಜರಾಜೇಶ್ವರಿ ನಗರ ಆರ್ಚ್ ಬಳಿ ಗ್ರೇಡ್ ಸಪರೇಟರ್ ನಿರ್ಮಾಣ ಸಂಬಂಧ ಜಂಟಿ ಸ್ಥಳ ಪರಿಶೀಲನೆ ನಡೆಸಿದರು.

ಇದೇ ಸಂದರ್ಭದಲ್ಲಿ ರಾಜರಾಜೇಶ್ವರಿ ನಗರಕ್ಕೆ ಸಿಗ್ನಲ್ ಫ್ರೀ ಯೂಟರ್ನ್ ನಿರ್ಮಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಬಿಬಿಎಂಪಿ ಮಾಜಿ ಸದಸ್ಯರಾದ ರಾಮಚಂದ್ರ, ಮುಖಂಡರಾದ ವಿ.ಸಿ.ಚಂದ್ರು, ವಾರ್ಡ್ ಅಧ್ಯಕ್ಷರಾದ ಸವಿತಾ ಭಟ್, ಅಧೀಕ್ಷಕ ಅಭಿಯಂತರರಾದ ನಂದೀಶ್, ಅಭಿಯಂತರರು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.

Related