ಕೈ ಅಭ್ಯರ್ಥಿ ಸುನಿಲ್ ಬೋಸ್ ಭರ್ಜರಿ ಮತ ಬೇಟೆ

ಕೈ ಅಭ್ಯರ್ಥಿ ಸುನಿಲ್ ಬೋಸ್ ಭರ್ಜರಿ ಮತ ಬೇಟೆ

ಚಾಮರಾಜನಗರ: ಕರ್ನಾಟಕ ರಾಜ್ಯದಲ್ಲಿ ಲೋಕಸಭಾ ಚುನಾವಣೆಗೆ ದಿನಗಣನೆ ಪ್ರಾರಂಭವಾಗಿದ್ದು ಎಲ್ಲಾ ಪಕ್ಷದ ಅಭ್ಯರ್ಥಿಗಳು ತಮ್ಮ ತಮ್ಮ ಕ್ಷೇತ್ರದಲ್ಲಿ ಭರ್ಜರಿ ಮತ ಪ್ರಚಾರದಲ್ಲಿ ತೊಡಗಿದ್ದು ಇಂದು ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಸಚಿವ ಎಚ್ ಸಿ ಮಾದೇವಪ್ಪ ಅವರ ಪುತ್ರ ಸುನಿಲ್ ಬೋಸ್ ಅವರು, ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ಜಿಲ್ಲಾ ಪಂಚಾಯತಿ ಹರವೆ ಯಲ್ಲಿ ಶಾಸಕರಾದ ಹೆಚ್.ಎಂ. ಗಣೇಶ್ ಪ್ರಸಾದ್‌ ಅವರು ಮತ ಪ್ರಚಾರ ಮಾಡಿದ್ದಾರೆ.

ಇನ್ನು ಮತ ಪ್ರಚಾರದ ನಂತರ ಬೃಹತ್ ಸಭೆ ನಡೆದಿದ್ದು ಈ ಸಭೆಯಲ್ಲಿ ಸುನಿಲ್ ಬೋಸ್ ಅವರು ಕಾಂಗ್ರೆಸ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.

ಈ ಬಾರಿ ನಿಮ್ಮ ಅಮೂಲ್ಯವಾದ ಮತವನ್ನು ಕಾಂಗ್ರೆಸ್ಗೆ ನೀಡಿ, ಕೇಂದ್ರದಲ್ಲಿ ಬಿಜೆಪಿ ಆಡಳಿತ ಕಿತ್ತೆಸೆದು ನಮ್ಮ ಕಾಂಗ್ರೆಸ್ ಸರ್ಕಾರದ ಆಡಳಿತವನ್ನು ತಂದರೆ ಮಾತ್ರ ನಾವು ಅಭಿವೃದ್ಧಿಯಾಗಲು ಸಾಧ್ಯ ಇಲ್ಲವಾದರೆ, ಬಿಜೆಪಿ ಪಕ್ಷ ಮತ್ತೆ ಅಧಿಕಾರಕ್ಕೆ ಬಂದರೆ ಬಡವರು, ದೀನದಲಿತರು ಮತ್ತೆ ಸಂಕಷ್ಟಕ್ಕೆ ಇಡಾಗಬೇಕಾಗುತ್ತದೆ. ಹಾಗಾಗಿ ನಿಮ್ಮ ಮತವನ್ನು ಕಾಂಗ್ರೆಸ್ ಪಕ್ಷಕ್ಕೆ ನೀಡಿ ಎಂದು ಮತದಾರದಲ್ಲಿ ಮನವಿ ಮಾಡಿದ್ದಾರೆ.

ಈ ಸಂದರ್ಭದಲ್ಲಿಸಾವಿರಾರು ಕಾಂಗ್ರೆಸ್ ಮುಖಂಡರು ಮತ್ತು ಹರವೇ ಗ್ರಾಮಸ್ಥರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

 

 

 

Related