ಬೆಂಗಳೂರು: ರಾಜ್ಯದಲ್ಲಿ 2023ನೆಯ ಚುನಾವಣೆ ಗೆಲ್ಲಲೆಂದು ಕಾಂಗ್ರೆಸ್ ಪಕ್ಷವು ಗ್ಯಾರಂಟಿ ಹೆಸರಿನಲ್ಲಿ ಕುತಂತ್ರ ರಾಜಕಾರಣ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಹೇಳಿದ್ದಾರೆ.
ಮತದಾನಕ್ಕೂ ಮುನ್ನ ಕುಣಿಗಲ್, ಆರ್ಆರ್ ನಗರ ಸೇರಿ 42 ವಿಧಾನಸಭಾ ಕ್ಷೇತ್ರಗಳಲ್ಲಿ 60 ಸಾವಿರ ಕುಟುಂಬಗಳಿಗೆ ಕೂಪನ್ ಕಾರ್ಡ್ ಹಂಚಿದ್ದಾರೆ. ಈ ಕಾರ್ಡ್ ಹಿಂದೆ ಬಾರ್ಕೋಡ್ ನಂಬರ್ ಇದ್ದು, ಶಾಪ್ನಲ್ಲಿ ನೀವು ಸ್ವೈಪ್ ಮಾಡಿ 3,500 ರಿಂದ 5 ಸಾವಿರ ಬೆಲೆಯ ವಸ್ತು ಖರೀದಿ ಮಾಡಬಹುದು ಎಂದು ಆಮಿಷ ಒಡ್ಡಿದ್ದಾರೆ. ಈ ಕುರಿತು ಚುನಾವಣಾ ಆಯೋಗಕ್ಕೆ ದೂರು ನೀಡುವುದರಿಂದ ಯಾವುದೇ ಉಪಯೋಗವಿಲ್ಲ. ಬಿಜೆಪಿ ಸರ್ಕಾರದ್ದು 40% ಹೇಳಿದ್ರಲ್ಲ, ಈಗ ಏನು ಹೇಳ್ತೀರಿ, 5 ಸಾವಿರ 60 ಸಾವಿರ ಕಾರ್ಡ್ ಅಂದ್ರೆ 30 ಕೋಟಿಯಾಯ್ತು, 30 ಕೋಟಿ ಗಿಫ್ಟ್ ಕೊಡಬೇಕು ನೀವಿಗಾ ಎಂದು ಕಾಂಗ್ರೆಸ್ ವಿರುದ್ದ ಹರಿಹಾಯ್ದಿದ್ದಾರೆ.