ಕೈ ಶಾಸಕ ಶಾಮನೂರು ಅಚ್ಚರಿ ಹೇಳಿಕೆ

ಕೈ ಶಾಸಕ ಶಾಮನೂರು ಅಚ್ಚರಿ ಹೇಳಿಕೆ

ಶಿವಮೊಗ್ಗ: ಶಾಮನೂರು ಶಿವಶಂಕರ ಶಿವಶಂಕರಪ್ಪನವರು ನಿನ್ನೆ ಒಂದು ಅಚ್ಚರಿಯ ಹೇಳಿಕೆಯನ್ನು ನೀಡಿದ್ದಾರೆ.

ಬಿಜೆಪಿಯ ಸಂಸದ ಬಿ ವೈ ರಾಘವೇಂದ್ರ ಅವರು ಒಳ್ಳೆಯ ಕೆಲಸ ಮಾಡಿದ್ದಾರೆ ಹಾಗಾಗಿ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬಿ ವೈ ರಾಘವೇಂದ್ರ ಅವರನ್ನ ಗೆಲ್ಲಿಸಿ ಎಂದು ಬಹಿರಂಗ ಸಭೆಯಲ್ಲಿ ಶಾಮನೂರ ಶಿವಶಂಕರಪ್ಪ ಅವರು ಹೇಳಿದ್ದಾರೆ.

ಶಿವಮೊಗ್ಗ ಕಾರ್ಯಕ್ರಮ ಒಂದರಲ್ಲಿ ಶಾಮನೂರು ಶಿವಶಂಕ್ರಪ್ಪ ಮತ್ತು ಬಿ ವೈ ರಾಘವೇಂದ್ರ ಅವರು ಒಂದೇ ವೇದಿಕೆಯಲ್ಲಿ ಹಾಸನರಾಗಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಮನೂರು ಶಿವಶಂಕರಪ್ಪನವರು, ಮುಂದಿನ ಚುನಾವಣೆಯಲ್ಲಿ ಬಿ ವೈ ರಾಘವೇಂದ್ರ ಗೆಲ್ಲಬೇಕು. ಇವರು ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದಾರೆ, ಉತ್ತಮ ಸಂಸದರನ್ನು ಆಯ್ಕೆ ಮಾಡಿದ್ದೀರಿ, ಹಾಗಾಗಿ ಈ ಬಾರಿಯೂ ಕೂಡಾ ಲೋಕಸಭಾ ಚುನಾವಣೆಯಲ್ಲಿ ರಾಘವೇಂದ್ರಗೆ ಮತ ಹಾಕಿ ರಾಘವೇಂದ್ರನನ್ನು ಗೆಲ್ಲಿಸಿ ಎಂದು ಬಹಿರಂಗ ಸಭೆಯಲ್ಲಿ ಶಾಮನೂರು ಶಂಕ್ರಪ್ಪ ಅವರು ಹೇಳಿದ್ದಾರೆ.

ಬಿಜೆಪಿ ಪಕ್ಷದಿಂದ ಬೇರೆಯಾರಿಗೂ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ನೀಡುವುದಿಲ್ಲ ಹಾಗಾಗಿ ಈ ಬಾರಿ ಕೂಡ ಬಿ ವೈ ವಿಜಯೇಂದ್ರ ಅವರಿಗೆ ಬಿಜೆಪಿ ಪಕ್ಷ ಟಿಕೆಟ್ ನೀಡಲಿದ್ದು, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಸಂಸದ ಬಿ ವೈ ರಾಘವೇಂದ್ರನನ್ನು ಗೆಲ್ಲಿಸಬೇಕೆಂದು ಕಾಂಗ್ರೆಸ್ ನ ಶಾಸಕ  ಶಾಮನೂರ ಶಿವಶಂಕರಪ್ಪ ಅವರು ಅಚ್ಚರಿಯ ಹೇಳಿಕೆಯನ್ನು ನೀಡಿದ್ದಾರೆ.

ಇನ್ನು ಬಿಜೆಪಿ ಬಗ್ಗೆ ಬಹುಪರಕ್ ಹೇಳಿದ ಕಾಂಗ್ರೆಸ್ನ ಶಾಸಕ ಶಾಮನೂರ್ ಶಿವಶಂಕರಪ್ಪ ಅವರ ಹೇಳಿಕೆಯನ್ನು ರಾಜ್ಯ ಕಾಂಗ್ರೆಸ್ ಹೇಗೆ ಸ್ವಾಗತಿಸುತ್ತದೆ ಎಂದು ಕಾದು ನೋಡಬೇಕಿದೆ.

Related