ಕೈ ಸೇರ್ತಾರ ವಿ. ಸೋಮಣ್ಣ?

ಕೈ ಸೇರ್ತಾರ ವಿ. ಸೋಮಣ್ಣ?

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಸಚಿವ ವಿ ಸೋಮಣ್ಣ ಅವರು ಸೋತಿರುವುದರಿಂದ ಬಿಜೆಪಿ ಪಕ್ಷದ ವಿರುದ್ಧವೇ ಕಿಡಿ ಕಾರುತ್ತಿದ್ದಾರೆ. ಸೋಲಿನ ಸೇಡನ್ನು ತೋರಿಸಿಕೊಳ್ಳಲು ವಿ ಸೋಮಣ್ಣ ಅವರು ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ.

ಹೌದು, ವಿಧಾನಸಭಾ ಚುನಾವಣೆಯಲ್ಲಿ ಸೋಲು, ರಾಜ್ಯಾಧ್ಯಕ್ಷ ಸ್ಥಾನದಿಂದ ವಂಚಿತರಾಗಿರೋ ವಿ.ಸೋಮಣ್ಣ, ಪಕ್ಷದ ಮೇಲೆಯೇ ಮುನಿಸಿಕೊಂಡಿದ್ದಾರೆ. ಎಲ್ಲದಕ್ಕೂ ಡಿಸೆಂಬರ್ 6ರಂದು ಉತ್ತರ ನೀಡುವೆ ಅಂದಿರೋ ವಿ ಸೋಮಣ್ಣ ಇಂದು ತೆಗೆದುಕೊಳ್ಳುವ ನಿರ್ಧಾರದ ಬಗ್ಗೆ ಕುತೂಹಲ ಮನೆ ಮಾಡಿದೆ. ಸಿದ್ದಗಂಗಾ ಮಠದಲ್ಲಿ ವಿ.ಸೋಮಣ್ಣ ಪ್ರತಿಷ್ಠಾನದಿಂದ ಗುರುಭವನ ನಿರ್ಮಾಣ ಮಾಡಲಾಗಿದೆ. ಇಂದು ಗುರುಭವನದ ಉದ್ಘಾಟನೆ ನಡೆಯಲಿದ್ದು, ಕಾರ್ಯಕ್ರಮಕ್ಕೆ ಕಾಂಗ್ರೆಸ್ ನಾಯಕರನ್ನು ಸೋಮಣ್ಣ ಆಹ್ವಾನಿಸಿದ್ದಾರೆ.

 

Related