ಕೈ ವಿರುದ್ದ ಕಮಲ ಪ್ರತಿಭಟನೆ

ಕೈ ವಿರುದ್ದ ಕಮಲ ಪ್ರತಿಭಟನೆ

ಬೆಂಗಳೂರು: ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾನೂನನ್ನು ಹಿಂಪಡೆಯುವ ಸುಳಿವು ನೀಡಿರುವ ಪಶುಸಂಗೋಪನಾ ಸಚಿವ ಕೆ ವೆಂಕಟೇಶ್ ಅವರ ಹೇಳಿಕೆ ವಿರೋಧಿಸಿ ಬಿಜೆಪಿ ಮಂಗಳವಾರ ಕರ್ನಾಟಕದಾದ್ಯಂತ ಕಾಂಗ್ರೆಸ್ ನೇತೃತ್ವದ ಸರ್ಕಾರದ ವಿರುದ್ಧ ಪ್ರತಿಭಟನೆಯನ್ನು ಮುಂದುವರೆಸಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಹಲವಾರು ಬಿಜೆಪಿ ಮುಖಂಡರು ಜಮಾಯಿಸಿ ಪ್ರತಿಭಟನೆಯ ಸಂಕೇತವಾಗಿ ಗೋಪೂಜೆ ನಡೆಸಿದರು. ಆದರೆ, ಬಿಜೆಪಿಯ ಯಾವೊಬ್ಬ ಸಂಸದ ಮತ್ತು ಶಾಸಕರು ಪ್ರತಿಭಟನೆಯಲ್ಲಿ ಭಾಗವಹಿಸಲಿಲ್ಲ.

ಎಮ್ಮೆಗಳನ್ನು ಕಡಿಯಬಹುದಾದರೆ ಹಸುಗಳನ್ನು ಏಕೆ ಕೊಲ್ಲಬಾರದು ಎಂದು ವೆಂಕಟೇಶ್ ಅವರು ಪ್ರಶ್ನಿಸಿದ್ದರು. ಆಮೂಲಕ ಗೋಹತ್ಯೆ ನಿಷೇಧ ಕಾನೂನು ವಾಪಸ್ ಪಡೆಯುವ ಸುಳಿವು ನೀಡಿದ್ದರು.

ಗೋಹತ್ಯೆ ನಿಷೇಧವನ್ನು ಸರ್ಕಾರ ಹಿಂಪಡೆಯಬಾರದು ಎಂದು ಒತ್ತಾಯಿಸಿ ಸೋಮವಾರ ಬಿಜೆಪಿ ಕಾರ್ಯಕರ್ತರು ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದ್ದರು.

 

Related