ಕೇಜ್ರಿ ಪಟ್ಟಾಭಿಷೇಕಕ್ಕೆ ಮಹೂರ್ತ ಫಿಕ್ಸ್

ಕೇಜ್ರಿ ಪಟ್ಟಾಭಿಷೇಕಕ್ಕೆ ಮಹೂರ್ತ ಫಿಕ್ಸ್

ನವದೆಹಲಿ, ಫೆ.12 : ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಹ್ಯಾಟ್ರಿಕ್ ಗೆಲುವಿನ ಭರ್ಜರಿ ಜಯಗಳಿಸಿರುವ ಆಮ್ ಆದ್ಮಿ ಪಾರ್ಟಿ ಫೆ.14 ರಂದು (ಪ್ರೇಮಿಗಳ ದಿನಾಚರಣೆ) ಸಿಎಂಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ರಾಜಧಾನಿಯಲ್ಲಿಂದು ನಡೆದ ಎಎಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಕೇಜ್ರಿವಾಲ್ ಅವರನ್ನು ಆಮ್ ಆದ್ಮಿ ಪಾರ್ಟಿ ಶಾಸಕಾಂಗ ಪಕ್ಷದ (ಎಎಪಿ ಎಲ್ಪಿ) ನಾಯಕರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಇದರೊಂದಿಗೆ ಎಎಪಿ ಮುಖ್ಯಸ್ಥರು ಮೂರನೇ ಬಾರಿ ದೆಹಲಿಯ ಮುಖ್ಯಮಂತ್ರಿಯಾಗುತ್ತಿದ್ದಾರೆ. 2013ರ ಡಿಸೆಂಬರ್ನಿಂದ 2014ರ ಫೆಬ್ರವರಿವರೆಗೆ ಅವರು ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿದ್ದರು. ನಂತರ 2015ರ ಫೆ. ಎರಡನೇ ಬಾರಿ ದೆಹಲಿ ಸಿಎಂ ಆದರು. ಅರವಿಂದ ಕೇಜ್ರಿವಾಲ್ ದೆಹಲಿ ಮುಖ್ಯಮಂತ್ರಿಯಾಗಿ 3ನೇ ಬಾರಿ ಪ್ರಮಾಣವಚನ ಸ್ವೀಕಾರ ಸಮಾರಂಭವನ್ನು ಅತ್ಯಂತ ಅದ್ಧೂರಿಯಾಗಿ ನಡೆಸಲು ಪಕ್ಷ ತೀರ್ಮಾನಿಸಿದೆ.

Related