ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ ಸಚಿವ

ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ ಸಚಿವ

ಬೆಳಗಾವಿ : ಮೃತ ವ್ಯಕ್ತಿಯೊಬ್ಬರ ಶವವನ್ನು ಸೈಕಲ್ ಮೇಲೆ ತೆಗೆದುಕೊಂಡು ಹೋಗಿ ಶವಸಂಸ್ಕಾರ ಮಾಡಿರುವಂತಹ ಅಮಾನವೀಯ ಘಟನೆ ನಡೆದರೆ ಸಂಬಂಧಿಸಿದ ಅಧಿಕಾರಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗೆ ಮತ್ತು ಜಿಲ್ಲಾ ಆರೋಗ್ಯಾಧಿಕಾರಿಗೆ ಸಚಿವ ರಮೇಶ್ ಜಾರಕಿಹೊಳಿ ಎಚ್ಚರಿಕೆ ನೀಡಿದರು.

ಕಿತ್ತೂರು ತಾಲ್ಲೂಕಿನ ಎಂಕೆ ಹುಬ್ಬಳ್ಳಿಯಲ್ಲಿ ಮೃತ ವ್ಯಕ್ತಿಯೊಬ್ಬರ ಶವವನ್ನು ಸೈಕಲ್ ಮೇಲೆ ತೆಗೆದುಕೊಂಡು ಹೋಗಿ ಶವಸಂಸ್ಕಾರ ಮಾಡಿರುವ ವರದಿಯನ್ನು ಗಮನಿಸಿದ ಸಚಿವ ಜಾರಕಿಹೊಳಿ ನಾಗರಿಕ ಸಮಾಜದಲ್ಲಿರುವ ನಾವು ಸದಾ ಹೃದಯವಂತಿಕೆಯಿಂದ ಜೀವಿಸಬೇಕು. ಮೃತರ ಸಂಸ್ಕಾರವನ್ನೂ ಗೌರವಯುತವಾಗಿ ಮಾಡಬೇಕು ಎಂದು ಹೇಳಿದರು.

ಮಹಾಮಾರಿ  ಸೋಂಕಿನಿಂದಾಗಲೀ, ಬೇರೆ ಯಾವುದೇ ರೀತಿಯ ಅನಾರೋಗ್ಯದಿಂದ ಮೃತರಾದ ವ್ಯಕ್ತಿಗಳ ಅಂತ್ಯಕ್ರಿಯೆಗೆ ಅಧಿಕಾರಿಗಳು ಸೂಕ್ತ ಸಹಕಾರ ನೀಡಬೇಕು. ಬೆಳಗಾವಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಆರೋಗ್ಯಾಧಿಕಾರಿಗಳೊಂದಿಗೆ ಮಾತನಾಡಿದ್ದೇನೆ. ಇಂತಹ ಅಮಾನವೀಯ ಘಟಕಗಳು ಮರುಕಳಿಸದಂತೆ ಮುನ್ನೆಚ್ಚರಿಕೆ ವಹಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ ಎಂದರು. ಅಂತ್ಯಕ್ರಿಯೆ ನಡೆಸಲು ಏನಾದರೂ ತೊಂದರೆಗಳಾದ ಸಂದರ್ಭದಲ್ಲಿ ಅದಕ್ಕಾಗಿಯೇ ಒಂದು ದೂರವಾಣಿ ಸಂಖ್ಯೆ ರೂಪಿಸಿ ಅದಕ್ಕಾಗಿ ಅಧಿಕಾರಿಯೊಬ್ಬರನ್ನು ನಿಯೋಜಿಸಲು ಆದೇಶಿಸಿದ್ದೇನೆ ಎಂದರು.

Related