ಖರ್ಗೆ ನೇಮಕಕ್ಕೆ ತವರು ಜಿಲ್ಲೆಯಲ್ಲಿ ಹರ್ಷ

ಖರ್ಗೆ ನೇಮಕಕ್ಕೆ ತವರು ಜಿಲ್ಲೆಯಲ್ಲಿ ಹರ್ಷ

ಕಲಬುರ್ಗಿ : ಕೇಂದ್ರದ ಮಾಜಿ ಸಚಿವ ಎಂ. ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯಸಭೆ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವುದಕ್ಕೆ ತವರು ಜಿಲ್ಲೆಯಲ್ಲಿ ಹರ್ಷ ವ್ಯಕ್ತವಾಗಿದೆ.

1972ರಲ್ಲಿ ಅಂದಿನ ಅವಿಭಜಿತ ಕಲಬುರ್ಗಿ ಜಿಲ್ಲೆಯ ಗುರುಮಠಕಲ್ ಯಾದಗಿರಿ ಜಿಲ್ಲೆ ವಿಧಾನಸಭಾ ಕ್ಷೇತ್ರದಿಂದ ಚುನಾಯಿತರಾದ ಖರ್ಗೆ ಅವರು ಸತತ ಒಂಬತ್ತು ಬಾರಿ ವಿಧಾನಸಭಾ ಸದಸ್ಯರಾಗಿ ಆಯ್ಕೆಯಾದರು.

ದೇವರಾಜ ಅರಸು, ಎಂ. ವೀರಪ್ಪ ಮೊಯಿಲಿ, ಎಸ್.ಎಂ.ಕೃಷ್ಣ, ಎಸ್. ಬಂಗಾರಪ್ಪ, ಎನ್. ಧರ್ಮಸಿಂಗ್ ಸಂಪುಟದಲ್ಲಿ ಗೃಹ, ಕಂದಾಯ, ಸಮಾಜ ಕಲ್ಯಾಣ, ಸಾರಿಗೆ, ಶಿಕ್ಷಣ, ಸಣ್ಣ ನೀರಾವರಿ ಸೇರಿದಂತೆ ವಿವಿಧ ಖಾತೆಗಳನ್ನು ನಿರ್ವಹಿಸಿದ ಅನುಭವಿ.

ಕೆಪಿಸಿಸಿ ಅಧ್ಯಕ್ಷರಾಗಿ, ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿ, ಮಹಾರಾಷ್ಟ್ರ ಪಕ್ಷದ ಉಸ್ತುವಾರಿಯಾಗಿ ಕೆಲಸ ಮಾಡಿರುವ ಖರ್ಗೆ ಅವರು ಗುಲಬರ್ಗಾ ಕ್ಷೇತ್ರದಿಂದ ಎರಡು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು.

ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಡಾ. ಉಮೇಶ ಜಾಧವ ಅವರ ಎದುರು ಪರಾಭವಗೊಂಡರು. ನಂತರ ಕಾಂಗ್ರೆಸ್ ಹೈಕಮಾಂಡ್ ಅವರ ಪಕ್ಷ ನಿಷ್ಠೆಯನ್ನು ಗುರುತಿಸಿ ರಾಜ್ಯಸಭೆಗೆ ಆಯ್ಕೆ ಮಾಡಿತ್ತು.

Related