ಕೊಪ್ಪಳ : ಕೊಪ್ಪಳ ಜಿಲ್ಲೆಯ ಗಂಗಾವತಿಯ ಡಿಪೋ ನಿರ್ವಾಹಕ ಹನುಮಂತಪ್ಪ, ಕುಟುಂಬ ನಿರ್ವಹಣೆಗೆ ಹಣವಿಲ್ಲದೇ ಕಿಡ್ನಿ ಮಾರಾಟಕ್ಕೆ ಮುಂದಾಗಿದ್ದಾಗಿ ಫೇಸ್ಬುಕ್ ನಲ್ಲಿ ಪೋಸ್ಟ್ ಹಾಕಿಕೊಂಡಿದ್ದಾರೆ.
ಕೊರೋನಾ ಮಾಹಾಮಾರಿಯಿಂದಾಗಿ ಆರ್ಥಿಕ ಸಂಕಷ್ಟಕ್ಕೆ ತುತ್ತಾದಾಗ ಹಲವರು ಕೆಲಸ ಕಳೆದುಕೊಂಡು ಬೀದಿಗೆ ಬಂದಿದ್ದರೆ, ಇನ್ನು ಹಲವರಿಗೆ ಸಂಬಳವೇ ಸಿಗುತ್ತಿಲ್ಲ, ಮತ್ತೆ ಹಲವರಿಗೆ ಅರ್ಧ ಸಂಬಳದಲ್ಲೇ ಕುಟುಂಬವನ್ನು ನಿರ್ವಹಣೆ ಮಾಡಬೇಕಾದ ದುಸ್ಥಿತಿ. ಇನ್ನು ಸಾರಿಗೆ ಸಿಬ್ಬಂದಿಗಳ ಆರ್ಥಿಕ ಸಂಕಷ್ಟಕ್ಕಂತೂ ಕೊನೆಯಿಲ್ಲ.
ಕಳೆದ ಎರಡು ತಿಂಗಳಿಂದ ಸಂಬಳವಿಲ್ಲದೇ ಪರದಾಡುತ್ತಿದ್ದು, ಮನೆ ಬಾಡಿಗೆ ಕಟ್ಟಲು, ರೇಷನ್ ತರಲೂ ಕೂಡ ಹಣವಿಲ್ಲ. ಹಾಗಾಗಿ ನಾನು ನನ್ನ ಕಿಡ್ನಿ ಮಾರಾಟ ಮಾಡುತ್ತಿದ್ದೇನೆ ಎಂದು ಹೇಳಿ ಮೊಬೈಲ್ ನಂಬರ್ ಸಮೇತವಾಗಿ ಎಫ್ಬಿಯಲ್ಲಿ ಪೋಸ್ಟ್ ಹಾಕಿದ್ದಾರೆ.