ಕೊಪ್ಪಳ: ಕೊಪ್ಪಳದ ಗಂಗಾವತಿ ತಾಲ್ಲೂಕಿನಲ್ಲಿ ಕೊರೋನಾ ಸೋಂಕು ಹೆಚ್ಚಾದ ಕಾರಣ ಗಂಗಾವತಿ ತಾಲ್ಲೂಕು ಹಾಗೂ ನಗರವನ್ನು ಲಾಕ್ಡೌನ್ ಮಾಡಲಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ ಪಾಟೀಲ್ ಅವರ ನೇತೃತ್ಬದಲ್ಲಿ ಗಂಗಾವತಿಯ ಶ್ರೀರಾಮನಗರ, ಹಣವಾಳ, ಹೇರೂರು ಗ್ರಾಮಗಳಲ್ಲಿ 10 ದಿನಗಳ ಕಾಲ ರಾತ್ರಿ 8 ಗಂಟೆಯ ನಂತರ ಸಂಪೂರ್ಣವಾಗಿ ಲಾಕ್ಡೌನ್ ಮಾಡಲಾಗುತ್ತದೆ.
ಅನಗತ್ಯವಾಗಿ ಓಡಾಡುವವರನ್ನು ನೇರವಾಗಿ ಕ್ವಾರಂಟೈನ್ಗೆ ಕಳುಹಿಸಲಾಗುತ್ತದೆ ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದರು.