ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಮೀಟಿಂಗ್

ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಮೀಟಿಂಗ್

ಬೆಂಗಳೂರು, ಏ. 20 : ಕೊರೊನಾ ಸೋಂಕಿನ ಸಂದರ್ಭದಲ್ಲಿ ಸರ್ಕಾರ ತೆಗೆದುಕೊಳ್ಳುವ ಎಲ್ಲಾ ಕ್ರಮಗಳಿಗೆ ಕಾಂಗ್ರೆಸ್ ಬೆಂಬಲ ನೀಡಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಪಾದರಾಯನಪುರದ ಗಲಭೆ ಹಿನ್ನೆಲೆಯಲ್ಲಿ ಶಿವಕುಮಾರ್ ಅವರು ತಮ್ಮ ಸದಾಶಿವನಗರ ನಿವಾಸದಲ್ಲಿ ಬೆಂಗಳೂರಿನ ಮುಸ್ಲಿಂ ಮುಖಂಡರ ಜತೆ ಸೋಮವಾರ ಸಭೆ ನಡೆಸಿದರು.
ಗಲಭೆ ಹಿನ್ನೆಲೆಯಲ್ಲಿ ಇಂದು ತುರ್ತು ಸಭೆ ನಡೆಸಲಾಗಿದೆ. ಶಾಸಕ ಜಮೀರ್ ಅಹಮದ್ ಖಾನ್ ಅವರಿಗೂ ಮೊದಲು ಆಹ್ವಾನ ನೀಡಲಾಗಿತ್ತು. ಆದರೆ ಅಲ್ಲಿನ ಪರಿಸ್ಥಿತಿ ಸುಧಾರಿಸಲು ಜಮೀರ್ ಅಲ್ಲೇ ಇರಬೇಕು ಎಂಬ ಕಾರಣಕ್ಕಾಗಿ ಸದ್ಯಕ್ಕೆ ಸಭೆಗೆ ಬರುವುದು ಬೇಡ ಎಂದು ನಾನೇ ಸಲಹೆ ನೀಡಿದ್ದೆ. ಹಾಗಾಗಿ ಜಮೀರ್ ಸಭೆಗೆ ಬಂದಿಲ್ಲ ಎಂದರು.

Related